Home / ಕವನ / ಕವಿತೆ / ಕೊಡು ನಿನ್ನ ದುಃಖ

ಕೊಡು ನಿನ್ನ ದುಃಖ

ನನ್ನ ಸೌಂದರ್ಯವನ್ನು
ಮೆಚ್ಚಿಕೊಂಡ ಜನ
ನನ್ನ ಸರಳತೆಯನ್ನು
ಮೆಚ್ಚಿಕೊಂಡ ಜನ
ನನ್ನ ದುಃಖ ಎಷ್ಟೆಂದು ಕೇಳಲಿಲ್ಲ.

ನನ್ನನ್ನು ಪ್ರೀತಿಸಿದ ತಂದೆ
ನನ್ನನ್ನು ಸಲಹಿದ ತಾಯಿ
ನನ್ನ ಆಸೆಗಳೇನು
ಎಂದು ಕೇಳಲಿಲ್ಲ.

ನಾನು ನೀಲಿ ನಕಾಶೆಯೊಳಗೆ
ಹೊಳೆಯುವ ಕನಸುಗಳನ್ನು
ಗುರುತಿಸುತ್ತಿರುವಾಗ
ನನ್ನ ಜೀವದ ಹುಡುಗ
‘ನೀನೆಷ್ಟು ಮುಗುದೆ’
ಎಂದು ವಿಷಾದದಿಂದ ನಕ್ಕ.

ಆವತ್ತೆ ನನಗೆ ಗೊತ್ತಾಯಿತು,
ಈ ಜಗತ್ತಿನಲ್ಲಿರುವುದು
ಕೊಳೆತ ಹೃದಯಗಳು ಮಾತ್ರ.
ಈ ಜಗತ್ತಿನಲ್ಲಿರುವುದು ಹುಳಿತ ಕಣ್ಣುಗಳು ಮಾತ್ರ.

ಅಂದಿನಿಂದಲೆ ನಾನು
ಎಲ್ಲರ ಬಳಿ ಕಣ್ಣೀರು
ಬೇಡಲು ಶುರುಮಾಡಿದೆ.
ಎಲ್ಲರ ಕನಸುಗಳನ್ನು
ಕುತೂಹಲಿಯಾಗಿ ನೋಡಿದೆ.

ನನ್ನೆದೆಯೊಳಗೆ
ಹರಳುಗಟ್ಟುತ್ತಿತ್ತು ದುಃಖ
ಬೆಟ್ಟವಾಗುತ್ತಿತ್ತು ದುಃಖ
ನಾನು ಎಲ್ಲರಿಗೂ ಕೂಗಿ ಹೇಳುತ್ತಿದ್ದೆ
ನೋಡಿ-
ಈ ಬೆಟ್ಟ ಕಣ್ಣೀರಿನದು
ನನ್ನದು ಹಾಗು ನಿಮ್ಮದು.

ಬೆಟ್ಟ ಕರಗಿ ಪ್ರವಾಹವಾಗಿ
ಹರಿಯುತ್ತಿತ್ತು ದುಃಖ.
ನಾನು ಎಲ್ಲರಿಗೂ ಕೂಗಿ ಹೇಳುತ್ತಿದ್ದೆ
ನೋಡಿ-
ಈ ಪ್ರವಾಹ ಕಣ್ಣೀರಿನದು, ನನ್ನದು ಹಾಗೂ ನಿಮ್ಮದು.

ಎಲ್ಲ ನಕ್ಕರು, ಹೊರಟೇ ಹೋದರು.
ನಾನೊಬ್ಬಳೆ ಆಗಿದ್ದೆ
ಜೊತೆಗೆ ಬೆಟ್ಟ-ಪ್ರವಾಹ.

ಕೊನೆಗೂ ನೆನಪಾಯಿತು
ಹೌದು
ಅದು ಅವನದೆ ಮುಖ.
ಅದು ಕೇಳುತ್ತಿತ್ತು
ಕೊಡು ನಿನ್ನ ದುಃಖ
ಕೊಡು ನಿನ್ನ ದುಃಖ.


Tagged:

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...