Home / ಕವನ / ಕವಿತೆ / ಮೋಜ ನೋಡಿರಿ ಗಾಂಜಿಯಮಕಿನ

ಮೋಜ ನೋಡಿರಿ ಗಾಂಜಿಯಮಕಿನ

ಮೋಜ ನೋಡಿರಿ ಗಾಂಜಿಯಮಕಿನ
ತೇಜಿಯೇರಿದ್ಹಾಂಗ ಜುಲಾಸ್ತದ ಅಮಲಾ
ಈ ಜನರಿನ್ನೇನಿದು ಬಲ್ಲರು ದುರ್ಗುಣ ಮಾಡುವಂತಿರಲು
ಸಹಜವಾದ ಸದ್ಬೀಜದ ಮಹಿಜನವನದಲ್ಲು ಫಲವಾಗಿರಲು
ಶ್ರೀಜಗದೀಶನ ಪೂಜಿತ ಮುನಿಜನ ರಾಜೀವನ ಮೋಹಿಸಲು
ಸೋಜಿಗೆನಿಪ ಶುಭವಾದ ವೃಕ್ಷದಲಿ
ಜನಿಸಿದ ಈ ಮುಗುಳು ಚಿಗಿತು ಬೆಳದಿಹುದು ತೇಜಸು ಪುಷ್ಪಗೊಂಚಲ
ಗೊನಿ ಕೆಂಜಾಗಿನ ವರ್ಣದಲಿ ರಾಜಿಸುವದರಿಂದ ಕುಸುಮಾರ್ಗದ ಫಲ
ಕಾಮಿಸಿ ವ್ಯಾಳ್ಯಗಳು ರಾಜಯೋಗಿಗಳು

ನೈಜಾಮದ ಗೋದಾವರಿ ತೀರದ ಜಲದೊಳು ಮರ್ದಿಸಲು
ಶೋಭಿಪ ಸತ್ವ ರಜೋಗುಣ ತತ್ವದ
ತಪ್ಪಲ ಕೂಡಿರಲು ಗುಳಿಗಿಯಾಗಿರಲು
ಸಾಧುಸಂತರನಾದರಿಸುತ ನಿಜಬೋಧದಿ ಮುಳಗಿರಲು ||೧||

ಬೋಧಾಮೃತ ಸಾನಂದದಿ
ಸಾಧಕರು ಕೂಡಿ ಮೋದದಲಿ ನೋಡಿ
ಮೇದಿನಿ ಸ್ಥಲದಂತೆ ಆ ಕೃತಿಯನು ದಂಡಿಸಿದರು ತಿಂಡಿ
ಶೋಭಿಸಿ ಶರೀರ ಬುರುಡಿಗೆ ತನುವಿನ ಮೀರು
ಇದಕೆ ಜೋಡಿ ಜಲದಿ ಒಡಗೂಡಿ
ಶ್ರೀಧರ ಬ್ರಹ್ಮ ಸದಾಶಿವ ಮೂವರು ಆಧಾರವ ಮಾಡಿ
ಕ್ರೋಧಾದಿಗಳನ್ನು ಛೇದಿಸಿ ಜ್ಞಾನದ ಚಿಲುಮೆ-
ಯೊಳಗೆ ನೀಡಿ ಅಗ್ನಿಯನು ತೋಡಿ
ಈ ದಶವಾಯು ಬಿಗಿದು ಸುಷುಮ್ನನಾಳದೊಳಗೆ ಹೂಡಿ
ಆದಿ ಸದ್ಗುರುವಿನ ಕೈಯೊಳಗೊಪ್ಪುವ ನಾದಿನ
ಗುಡಗುಡಿ ಸೇದಿ ನಲಿದಾಡಿ
ಬಾಧಿ ದುರಿತ ಬಹು ಬಂಧನದ ಕರ್ಮವು ಶೋಧಿಸಿ ಈಡ್ಯಾಡಿ ||೨||

ಈ ಪರಿ ಮಹಿಮದ ರೂಪ ನಿರಾಲ
ಪರಂಜ್ಯೋತಿ ನಿರ್ಮಿಸಿದ ರೀತಿ
ಸ್ಥಾಪಿಸಿದನು ಶಿವನಾವ ಪರಲೋಕದ ಕಲ್ಪದ್ರುಮದ ಜಾತಿ
ಕಾಪುರುಷರು ಕುಹಕರಿಗೆ ಸಲ್ಲರು ತಾಪಸಿಯರಿಗೆ ಪ್ರೀತಿ
ತತ್ವದ ನಡತೆ ಸೋಹಂ ಪದಕೇರಿಸಿ ತಾಂ
ಪರವಸ್ತುವ ತೋರಿಕೊಡುವ ರೀತಿ
ಶಾಸ್ತ್ರ ನುಡಿತೈತಿ ಪಾಪರಹಿತ ಪಂಚಾಕ್ಷರಿ ಪಠಿಸುತ
ಜೀವ ಪವನ ಒತ್ತಿ ತ್ರಿಕೂಟದಲ್ಹತ್ತಿ
ತಾ ಚರಿಸ್ಯಾಡುತ ನೋಡಲು ಪಶ್ಚಿಮ ಚಕ್ರದೊಳಗೆ ಸುತ್ತಿ
ಭೂಪತಿ ರಾಜಗೋವಿಂದನ ಅರಮನಿ
ಹೊಳೆವ ಚಂದ್ರಕಾಂತಿ ಮೂಲ ಸಿದ್ಧಾಂತಿ
ಭಾಪುರೆ ಶಿಶುನಾಳಧೀಶನ ವರವಿಲೆ ನಾ ಪಡೆದೆನು ಮುಕ್ತಿ ||೩||

*****

 

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...