ಮೋಜ ನೋಡಿರಿ ಗಾಂಜಿಯಮಕಿನ

ಮೋಜ ನೋಡಿರಿ ಗಾಂಜಿಯಮಕಿನ
ತೇಜಿಯೇರಿದ್ಹಾಂಗ ಜುಲಾಸ್ತದ ಅಮಲಾ
ಈ ಜನರಿನ್ನೇನಿದು ಬಲ್ಲರು ದುರ್ಗುಣ ಮಾಡುವಂತಿರಲು
ಸಹಜವಾದ ಸದ್ಬೀಜದ ಮಹಿಜನವನದಲ್ಲು ಫಲವಾಗಿರಲು
ಶ್ರೀಜಗದೀಶನ ಪೂಜಿತ ಮುನಿಜನ ರಾಜೀವನ ಮೋಹಿಸಲು
ಸೋಜಿಗೆನಿಪ ಶುಭವಾದ ವೃಕ್ಷದಲಿ
ಜನಿಸಿದ ಈ ಮುಗುಳು ಚಿಗಿತು ಬೆಳದಿಹುದು ತೇಜಸು ಪುಷ್ಪಗೊಂಚಲ
ಗೊನಿ ಕೆಂಜಾಗಿನ ವರ್ಣದಲಿ ರಾಜಿಸುವದರಿಂದ ಕುಸುಮಾರ್ಗದ ಫಲ
ಕಾಮಿಸಿ ವ್ಯಾಳ್ಯಗಳು ರಾಜಯೋಗಿಗಳು

ನೈಜಾಮದ ಗೋದಾವರಿ ತೀರದ ಜಲದೊಳು ಮರ್ದಿಸಲು
ಶೋಭಿಪ ಸತ್ವ ರಜೋಗುಣ ತತ್ವದ
ತಪ್ಪಲ ಕೂಡಿರಲು ಗುಳಿಗಿಯಾಗಿರಲು
ಸಾಧುಸಂತರನಾದರಿಸುತ ನಿಜಬೋಧದಿ ಮುಳಗಿರಲು ||೧||

ಬೋಧಾಮೃತ ಸಾನಂದದಿ
ಸಾಧಕರು ಕೂಡಿ ಮೋದದಲಿ ನೋಡಿ
ಮೇದಿನಿ ಸ್ಥಲದಂತೆ ಆ ಕೃತಿಯನು ದಂಡಿಸಿದರು ತಿಂಡಿ
ಶೋಭಿಸಿ ಶರೀರ ಬುರುಡಿಗೆ ತನುವಿನ ಮೀರು
ಇದಕೆ ಜೋಡಿ ಜಲದಿ ಒಡಗೂಡಿ
ಶ್ರೀಧರ ಬ್ರಹ್ಮ ಸದಾಶಿವ ಮೂವರು ಆಧಾರವ ಮಾಡಿ
ಕ್ರೋಧಾದಿಗಳನ್ನು ಛೇದಿಸಿ ಜ್ಞಾನದ ಚಿಲುಮೆ-
ಯೊಳಗೆ ನೀಡಿ ಅಗ್ನಿಯನು ತೋಡಿ
ಈ ದಶವಾಯು ಬಿಗಿದು ಸುಷುಮ್ನನಾಳದೊಳಗೆ ಹೂಡಿ
ಆದಿ ಸದ್ಗುರುವಿನ ಕೈಯೊಳಗೊಪ್ಪುವ ನಾದಿನ
ಗುಡಗುಡಿ ಸೇದಿ ನಲಿದಾಡಿ
ಬಾಧಿ ದುರಿತ ಬಹು ಬಂಧನದ ಕರ್ಮವು ಶೋಧಿಸಿ ಈಡ್ಯಾಡಿ ||೨||

ಈ ಪರಿ ಮಹಿಮದ ರೂಪ ನಿರಾಲ
ಪರಂಜ್ಯೋತಿ ನಿರ್ಮಿಸಿದ ರೀತಿ
ಸ್ಥಾಪಿಸಿದನು ಶಿವನಾವ ಪರಲೋಕದ ಕಲ್ಪದ್ರುಮದ ಜಾತಿ
ಕಾಪುರುಷರು ಕುಹಕರಿಗೆ ಸಲ್ಲರು ತಾಪಸಿಯರಿಗೆ ಪ್ರೀತಿ
ತತ್ವದ ನಡತೆ ಸೋಹಂ ಪದಕೇರಿಸಿ ತಾಂ
ಪರವಸ್ತುವ ತೋರಿಕೊಡುವ ರೀತಿ
ಶಾಸ್ತ್ರ ನುಡಿತೈತಿ ಪಾಪರಹಿತ ಪಂಚಾಕ್ಷರಿ ಪಠಿಸುತ
ಜೀವ ಪವನ ಒತ್ತಿ ತ್ರಿಕೂಟದಲ್ಹತ್ತಿ
ತಾ ಚರಿಸ್ಯಾಡುತ ನೋಡಲು ಪಶ್ಚಿಮ ಚಕ್ರದೊಳಗೆ ಸುತ್ತಿ
ಭೂಪತಿ ರಾಜಗೋವಿಂದನ ಅರಮನಿ
ಹೊಳೆವ ಚಂದ್ರಕಾಂತಿ ಮೂಲ ಸಿದ್ಧಾಂತಿ
ಭಾಪುರೆ ಶಿಶುನಾಳಧೀಶನ ವರವಿಲೆ ನಾ ಪಡೆದೆನು ಮುಕ್ತಿ ||೩||

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೋಜ ನೋಡಿರಿ ಗಾಂಜಿಯಮಕಿನ
Next post ಒಲವೇ… ಭಾಗ – ೩

ಸಣ್ಣ ಕತೆ

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…