Home / ಕವನ / ಕವಿತೆ / ಮೋಜ ನೋಡಿರಿ ಗಾಂಜಿಯಮಕಿನ

ಮೋಜ ನೋಡಿರಿ ಗಾಂಜಿಯಮಕಿನ

ಮೋಜ ನೋಡಿರಿ ಗಾಂಜಿಯಮಕಿನ
ತೇಜಿಯೇರಿದ್ಹಾಂಗ ಜುಲಾಸ್ತದ ಅಮಲಾ
ಈ ಜನರಿನ್ನೇನಿದು ಬಲ್ಲರು ದುರ್ಗುಣ ಮಾಡುವಂತಿರಲು
ಸಹಜವಾದ ಸದ್ಬೀಜದ ಮಹಿಜನವನದಲ್ಲು ಫಲವಾಗಿರಲು
ಶ್ರೀಜಗದೀಶನ ಪೂಜಿತ ಮುನಿಜನ ರಾಜೀವನ ಮೋಹಿಸಲು
ಸೋಜಿಗೆನಿಪ ಶುಭವಾದ ವೃಕ್ಷದಲಿ
ಜನಿಸಿದ ಈ ಮುಗುಳು ಚಿಗಿತು ಬೆಳದಿಹುದು ತೇಜಸು ಪುಷ್ಪಗೊಂಚಲ
ಗೊನಿ ಕೆಂಜಾಗಿನ ವರ್ಣದಲಿ ರಾಜಿಸುವದರಿಂದ ಕುಸುಮಾರ್ಗದ ಫಲ
ಕಾಮಿಸಿ ವ್ಯಾಳ್ಯಗಳು ರಾಜಯೋಗಿಗಳು

ನೈಜಾಮದ ಗೋದಾವರಿ ತೀರದ ಜಲದೊಳು ಮರ್ದಿಸಲು
ಶೋಭಿಪ ಸತ್ವ ರಜೋಗುಣ ತತ್ವದ
ತಪ್ಪಲ ಕೂಡಿರಲು ಗುಳಿಗಿಯಾಗಿರಲು
ಸಾಧುಸಂತರನಾದರಿಸುತ ನಿಜಬೋಧದಿ ಮುಳಗಿರಲು ||೧||

ಬೋಧಾಮೃತ ಸಾನಂದದಿ
ಸಾಧಕರು ಕೂಡಿ ಮೋದದಲಿ ನೋಡಿ
ಮೇದಿನಿ ಸ್ಥಲದಂತೆ ಆ ಕೃತಿಯನು ದಂಡಿಸಿದರು ತಿಂಡಿ
ಶೋಭಿಸಿ ಶರೀರ ಬುರುಡಿಗೆ ತನುವಿನ ಮೀರು
ಇದಕೆ ಜೋಡಿ ಜಲದಿ ಒಡಗೂಡಿ
ಶ್ರೀಧರ ಬ್ರಹ್ಮ ಸದಾಶಿವ ಮೂವರು ಆಧಾರವ ಮಾಡಿ
ಕ್ರೋಧಾದಿಗಳನ್ನು ಛೇದಿಸಿ ಜ್ಞಾನದ ಚಿಲುಮೆ-
ಯೊಳಗೆ ನೀಡಿ ಅಗ್ನಿಯನು ತೋಡಿ
ಈ ದಶವಾಯು ಬಿಗಿದು ಸುಷುಮ್ನನಾಳದೊಳಗೆ ಹೂಡಿ
ಆದಿ ಸದ್ಗುರುವಿನ ಕೈಯೊಳಗೊಪ್ಪುವ ನಾದಿನ
ಗುಡಗುಡಿ ಸೇದಿ ನಲಿದಾಡಿ
ಬಾಧಿ ದುರಿತ ಬಹು ಬಂಧನದ ಕರ್ಮವು ಶೋಧಿಸಿ ಈಡ್ಯಾಡಿ ||೨||

ಈ ಪರಿ ಮಹಿಮದ ರೂಪ ನಿರಾಲ
ಪರಂಜ್ಯೋತಿ ನಿರ್ಮಿಸಿದ ರೀತಿ
ಸ್ಥಾಪಿಸಿದನು ಶಿವನಾವ ಪರಲೋಕದ ಕಲ್ಪದ್ರುಮದ ಜಾತಿ
ಕಾಪುರುಷರು ಕುಹಕರಿಗೆ ಸಲ್ಲರು ತಾಪಸಿಯರಿಗೆ ಪ್ರೀತಿ
ತತ್ವದ ನಡತೆ ಸೋಹಂ ಪದಕೇರಿಸಿ ತಾಂ
ಪರವಸ್ತುವ ತೋರಿಕೊಡುವ ರೀತಿ
ಶಾಸ್ತ್ರ ನುಡಿತೈತಿ ಪಾಪರಹಿತ ಪಂಚಾಕ್ಷರಿ ಪಠಿಸುತ
ಜೀವ ಪವನ ಒತ್ತಿ ತ್ರಿಕೂಟದಲ್ಹತ್ತಿ
ತಾ ಚರಿಸ್ಯಾಡುತ ನೋಡಲು ಪಶ್ಚಿಮ ಚಕ್ರದೊಳಗೆ ಸುತ್ತಿ
ಭೂಪತಿ ರಾಜಗೋವಿಂದನ ಅರಮನಿ
ಹೊಳೆವ ಚಂದ್ರಕಾಂತಿ ಮೂಲ ಸಿದ್ಧಾಂತಿ
ಭಾಪುರೆ ಶಿಶುನಾಳಧೀಶನ ವರವಿಲೆ ನಾ ಪಡೆದೆನು ಮುಕ್ತಿ ||೩||

*****

 

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...