Home / ಕವನ / ಕವಿತೆ / ಬಿಡಿ ನನ್ನ ಪಾಡಿಗೆ ನನ್ನನ್ನು

ಬಿಡಿ ನನ್ನ ಪಾಡಿಗೆ ನನ್ನನ್ನು


ನೀವು ಕೇಳಿದ್ದು ಒಳ್ಳೆಯದೆ ಆಯಿತು.
ನನಗೀಗ ಎಲ್ಲವೂ ಅರ್ಥವಾಯಿತು.
ನೋಡಿ –

ಹಿಂಡುಹಿಂಡಾಗಿ ಅಲೆಯುವ
ಮೋಡಗಳಲ್ಲೊಂದು ತುಣುಕೆಂದೊ…

ಆಕಾಶದ ಕ್ಯಾನ್‌ವಾಸಿನಲ್ಲಿ
ಬಳಿದ ಬಣ್ಣಗಳಲ್ಲೊಂದು ಎಳೆಯೆಂದೊ…

ಕಣ್ಣಾಮುಚ್ಚಾಲೆಯಾಡುವ
ಮಿಂಚಿನೊಳಗೊಂದು ಕಿಡಿಯೆಂದೊ…

ಒರಟಾಗಿ ಬೀಸುವ
ಗಾಳಿಯಲ್ಲೊಂದು ಗೆರೆಯೆಂದೊ…
ಈಗವನನ್ನು ವರ್ಣಿಸುವುದಿಲ್ಲ.


ರಕ್ತ-ಮಾಂಸ-ಮೂಳೆ ವಿರಚಿತ
ನನ್ನೆದೆಯ ಮೇಲೆ ಮಲಗಿದ್ದ.
ಯಾರು ಕರೆದರೊ ಗೊತ್ತಿಲ್ಲ.
ಯಾಕೆ ಕರೆದರೊ ಗೊತ್ತಿಲ್ಲ.
ಯಾವಾಗ ಕರೆದರೊ ಗೊತ್ತಿಲ್ಲ.
ಪ್ರೀತಿಯನ್ನು ಒದ್ದು ಹೊರಟು ಹೋದ.

ನನಗನಿಸುತ್ತದೆ
ಮಣ್ಣಿನೊಳಗೆ ಹಿಡಿಯಾಗಿ ಮಲಗಿದ್ದಾನೆ,
ನಾನವನ ಮುಟ್ಟಲಾರೆ.
ಮಣ್ಣಿನೊಳಗೆ ಮೈ ಮರೆತು ಮಲಗಿದ್ದಾನೆ,
ನಾನವನ ಎಬ್ಬಿಸಲಾರೆ.


ನಿಮ್ಮದು ಪ್ರೀತಿಯಾದರೂ ಸರಿಯೆ
ನಿಮ್ಮದು ಕರುಣೆಯಾದರೂ ಸರಿಯೆ
ಬದಲಾಯಿಸಲಾರವು ನನ್ನನ್ನು.
ನಿಮ್ಮದು ಮಾಟವಾದರೂ ಸರಿಯೆ
ನಿಮ್ಮದು ಮಾಯೆಯಾದರೂ ಸರಿಯೆ
ಒಳಗಾಗಲಾರೆ ನಾನು.

ನಾನೀಗ ಕವಯತ್ರಿ ಅಲ್ಲ
ನನ್ನಲ್ಲಿ ಕಲ್ಪನೆಗಳಿಲ್ಲ
ನನ್ನಲ್ಲಿ ಕನಸುಗಳಿಲ್ಲ
ನನ್ನಲ್ಲಿ ಕವಿತೆಗಳಿಲ್ಲ.

ಈ ಬಣ್ಣ-ಬೆಡಗು ಯಾವುದೂ
ಬದುಕ ಬೆಳಗಿಸುವುದಿಲ್ಲ.

ಅವನ ನೆನಪನ್ನು ಉಸಿರಾಡುತ್ತೇನೆ,
ಬಿಡಿ ನನ್ನ ಪಾಡಿಗೆ ನನ್ನನ್ನು.


Tagged:

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...