Home / ಕವನ / ಕವಿತೆ / ಬಿಡಿ ನನ್ನ ಪಾಡಿಗೆ ನನ್ನನ್ನು

ಬಿಡಿ ನನ್ನ ಪಾಡಿಗೆ ನನ್ನನ್ನು


ನೀವು ಕೇಳಿದ್ದು ಒಳ್ಳೆಯದೆ ಆಯಿತು.
ನನಗೀಗ ಎಲ್ಲವೂ ಅರ್ಥವಾಯಿತು.
ನೋಡಿ –

ಹಿಂಡುಹಿಂಡಾಗಿ ಅಲೆಯುವ
ಮೋಡಗಳಲ್ಲೊಂದು ತುಣುಕೆಂದೊ…

ಆಕಾಶದ ಕ್ಯಾನ್‌ವಾಸಿನಲ್ಲಿ
ಬಳಿದ ಬಣ್ಣಗಳಲ್ಲೊಂದು ಎಳೆಯೆಂದೊ…

ಕಣ್ಣಾಮುಚ್ಚಾಲೆಯಾಡುವ
ಮಿಂಚಿನೊಳಗೊಂದು ಕಿಡಿಯೆಂದೊ…

ಒರಟಾಗಿ ಬೀಸುವ
ಗಾಳಿಯಲ್ಲೊಂದು ಗೆರೆಯೆಂದೊ…
ಈಗವನನ್ನು ವರ್ಣಿಸುವುದಿಲ್ಲ.


ರಕ್ತ-ಮಾಂಸ-ಮೂಳೆ ವಿರಚಿತ
ನನ್ನೆದೆಯ ಮೇಲೆ ಮಲಗಿದ್ದ.
ಯಾರು ಕರೆದರೊ ಗೊತ್ತಿಲ್ಲ.
ಯಾಕೆ ಕರೆದರೊ ಗೊತ್ತಿಲ್ಲ.
ಯಾವಾಗ ಕರೆದರೊ ಗೊತ್ತಿಲ್ಲ.
ಪ್ರೀತಿಯನ್ನು ಒದ್ದು ಹೊರಟು ಹೋದ.

ನನಗನಿಸುತ್ತದೆ
ಮಣ್ಣಿನೊಳಗೆ ಹಿಡಿಯಾಗಿ ಮಲಗಿದ್ದಾನೆ,
ನಾನವನ ಮುಟ್ಟಲಾರೆ.
ಮಣ್ಣಿನೊಳಗೆ ಮೈ ಮರೆತು ಮಲಗಿದ್ದಾನೆ,
ನಾನವನ ಎಬ್ಬಿಸಲಾರೆ.


ನಿಮ್ಮದು ಪ್ರೀತಿಯಾದರೂ ಸರಿಯೆ
ನಿಮ್ಮದು ಕರುಣೆಯಾದರೂ ಸರಿಯೆ
ಬದಲಾಯಿಸಲಾರವು ನನ್ನನ್ನು.
ನಿಮ್ಮದು ಮಾಟವಾದರೂ ಸರಿಯೆ
ನಿಮ್ಮದು ಮಾಯೆಯಾದರೂ ಸರಿಯೆ
ಒಳಗಾಗಲಾರೆ ನಾನು.

ನಾನೀಗ ಕವಯತ್ರಿ ಅಲ್ಲ
ನನ್ನಲ್ಲಿ ಕಲ್ಪನೆಗಳಿಲ್ಲ
ನನ್ನಲ್ಲಿ ಕನಸುಗಳಿಲ್ಲ
ನನ್ನಲ್ಲಿ ಕವಿತೆಗಳಿಲ್ಲ.

ಈ ಬಣ್ಣ-ಬೆಡಗು ಯಾವುದೂ
ಬದುಕ ಬೆಳಗಿಸುವುದಿಲ್ಲ.

ಅವನ ನೆನಪನ್ನು ಉಸಿರಾಡುತ್ತೇನೆ,
ಬಿಡಿ ನನ್ನ ಪಾಡಿಗೆ ನನ್ನನ್ನು.


Tagged:

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...