Home / ಕವನ / ಕವಿತೆ / ಈ ಹುಚ್ಚ ಚಿಮಣಿಗಳ ಚಲ್ಲಿಬಿಡಿರಿ

ಈ ಹುಚ್ಚ ಚಿಮಣಿಗಳ ಚಲ್ಲಿಬಿಡಿರಿ

ಪಂಚ ಕಳ್ಳರ ತಂದು ಮಂಚದಾ ಮೇಲಿರಿಸಿ
ಈ ಮುಗ್ಧ ಗೋವುಗಳು ಮೆರೆಸಿರುವವು
ಪಂಚ ಪೀಠವ ಕಟ್ಟಿ ಪಂಚ ಪಾಲಕಿ ಕಟ್ಟಿ
ಅಡ್ಡಾಗಿ ಉದ್ದಾಗಿ ಎತ್ತಿರುವವು

ಓ ಮುಗ್ಧ ಸೋದರರೆ ಅತಿಮುಗ್ಧ ಭಾವುಕರೆ
ಈ ಚರ್ಮ ಚೀಲಗಳ ಹೊರುವಿರೇಕೆ
ಆರತಿಯ ತಂದಿರುವ ಓ ಅಕ್ಕ ತಾಯಿಗಳೆ
ಈ ಹೆಣದ ಕುಂಡಗಳ ಪೂಜೆಯೇಕೆ

ಪಾಲಕಿಯ ಹೊತ್ತಿರುವ ಶಿವಭಕ್ತ ಗೋಪುಗಳೆ
ಶಿವನ ಹೆಸರಿಲೆ ಶವದ ಯಾತ್ರೆಯೇಕೆ
ಹೊಗಳಿಕೆಯನುಣಬಂದ ಹಣರಾಶಿ ಬೇಕೆಂದ
ಈ ಪಂಚ ವಂಚಕರ ತೇರುಯೇಕೆ

ತೋರಿಕೆಯ ಯೋಗಿಗಳ ಸೋರಿಕೆಯ ಕಾಮಿಗಳ
ಓ ತಾಯಿ ತಂದೆಗಳ ಸೇರಬೇಡಿ
ಹಾಲು ಕುಡಿಯಲು ಹೋಗಿ ವಿಷವ ಕುಡಿಯಲು ಬೇಡಿ
ಹಗಲು ಸುಲಿಗೆಗೆ ಹೆಗಲು ನೀಡಬೇಡಿ

ಕಾವಿಯುಡುಗರೆಯುಟ್ಟ ಕರಿಯ ಹೆಗ್ಗಣರಿವರು
ಇವರೆದೆಯ ಅಂಗಳದಿ ಪ್ರೀತಿಯಿಲ್ಲ
ಎದೆತೆರೆದ ಹೂವುಗಳ ದನವಾಗಿ ತಿಂದಿಹರು
ಇವರೆದೆಯ ಗುಡಿಯಲ್ಲಿ ದೇವರಿಲ್ಲ

ಶಿವನೊಬ್ಬನೇ ಸತ್ಯ ಸತ್ಯವೊಂದೇ ಶಿವನು
ಈ ಶವದ ಚಟ್ಟಗಳ ಚಲ್ಲಿಬಿಡಿರಿ
ನೀವು ಆತ್ಮನ ದೀಪ ದೇವದೇವನ ದೀಪ
ಈ ಹುಚ್ಚ ಚಿಮಣಿಗಳ ಚಲ್ಲಿಬಿಡಿರಿ


Tagged:

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...