Home / ಕವನ / ಕವಿತೆ / ಈ ಹುಚ್ಚ ಚಿಮಣಿಗಳ ಚಲ್ಲಿಬಿಡಿರಿ

ಈ ಹುಚ್ಚ ಚಿಮಣಿಗಳ ಚಲ್ಲಿಬಿಡಿರಿ

ಪಂಚ ಕಳ್ಳರ ತಂದು ಮಂಚದಾ ಮೇಲಿರಿಸಿ
ಈ ಮುಗ್ಧ ಗೋವುಗಳು ಮೆರೆಸಿರುವವು
ಪಂಚ ಪೀಠವ ಕಟ್ಟಿ ಪಂಚ ಪಾಲಕಿ ಕಟ್ಟಿ
ಅಡ್ಡಾಗಿ ಉದ್ದಾಗಿ ಎತ್ತಿರುವವು

ಓ ಮುಗ್ಧ ಸೋದರರೆ ಅತಿಮುಗ್ಧ ಭಾವುಕರೆ
ಈ ಚರ್ಮ ಚೀಲಗಳ ಹೊರುವಿರೇಕೆ
ಆರತಿಯ ತಂದಿರುವ ಓ ಅಕ್ಕ ತಾಯಿಗಳೆ
ಈ ಹೆಣದ ಕುಂಡಗಳ ಪೂಜೆಯೇಕೆ

ಪಾಲಕಿಯ ಹೊತ್ತಿರುವ ಶಿವಭಕ್ತ ಗೋಪುಗಳೆ
ಶಿವನ ಹೆಸರಿಲೆ ಶವದ ಯಾತ್ರೆಯೇಕೆ
ಹೊಗಳಿಕೆಯನುಣಬಂದ ಹಣರಾಶಿ ಬೇಕೆಂದ
ಈ ಪಂಚ ವಂಚಕರ ತೇರುಯೇಕೆ

ತೋರಿಕೆಯ ಯೋಗಿಗಳ ಸೋರಿಕೆಯ ಕಾಮಿಗಳ
ಓ ತಾಯಿ ತಂದೆಗಳ ಸೇರಬೇಡಿ
ಹಾಲು ಕುಡಿಯಲು ಹೋಗಿ ವಿಷವ ಕುಡಿಯಲು ಬೇಡಿ
ಹಗಲು ಸುಲಿಗೆಗೆ ಹೆಗಲು ನೀಡಬೇಡಿ

ಕಾವಿಯುಡುಗರೆಯುಟ್ಟ ಕರಿಯ ಹೆಗ್ಗಣರಿವರು
ಇವರೆದೆಯ ಅಂಗಳದಿ ಪ್ರೀತಿಯಿಲ್ಲ
ಎದೆತೆರೆದ ಹೂವುಗಳ ದನವಾಗಿ ತಿಂದಿಹರು
ಇವರೆದೆಯ ಗುಡಿಯಲ್ಲಿ ದೇವರಿಲ್ಲ

ಶಿವನೊಬ್ಬನೇ ಸತ್ಯ ಸತ್ಯವೊಂದೇ ಶಿವನು
ಈ ಶವದ ಚಟ್ಟಗಳ ಚಲ್ಲಿಬಿಡಿರಿ
ನೀವು ಆತ್ಮನ ದೀಪ ದೇವದೇವನ ದೀಪ
ಈ ಹುಚ್ಚ ಚಿಮಣಿಗಳ ಚಲ್ಲಿಬಿಡಿರಿ


Tagged:

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...