ಈ ಹುಚ್ಚ ಚಿಮಣಿಗಳ ಚಲ್ಲಿಬಿಡಿರಿ

ಪಂಚ ಕಳ್ಳರ ತಂದು ಮಂಚದಾ ಮೇಲಿರಿಸಿ
ಈ ಮುಗ್ಧ ಗೋವುಗಳು ಮೆರೆಸಿರುವವು
ಪಂಚ ಪೀಠವ ಕಟ್ಟಿ ಪಂಚ ಪಾಲಕಿ ಕಟ್ಟಿ
ಅಡ್ಡಾಗಿ ಉದ್ದಾಗಿ ಎತ್ತಿರುವವು

ಓ ಮುಗ್ಧ ಸೋದರರೆ ಅತಿಮುಗ್ಧ ಭಾವುಕರೆ
ಈ ಚರ್ಮ ಚೀಲಗಳ ಹೊರುವಿರೇಕೆ
ಆರತಿಯ ತಂದಿರುವ ಓ ಅಕ್ಕ ತಾಯಿಗಳೆ
ಈ ಹೆಣದ ಕುಂಡಗಳ ಪೂಜೆಯೇಕೆ

ಪಾಲಕಿಯ ಹೊತ್ತಿರುವ ಶಿವಭಕ್ತ ಗೋಪುಗಳೆ
ಶಿವನ ಹೆಸರಿಲೆ ಶವದ ಯಾತ್ರೆಯೇಕೆ
ಹೊಗಳಿಕೆಯನುಣಬಂದ ಹಣರಾಶಿ ಬೇಕೆಂದ
ಈ ಪಂಚ ವಂಚಕರ ತೇರುಯೇಕೆ

ತೋರಿಕೆಯ ಯೋಗಿಗಳ ಸೋರಿಕೆಯ ಕಾಮಿಗಳ
ಓ ತಾಯಿ ತಂದೆಗಳ ಸೇರಬೇಡಿ
ಹಾಲು ಕುಡಿಯಲು ಹೋಗಿ ವಿಷವ ಕುಡಿಯಲು ಬೇಡಿ
ಹಗಲು ಸುಲಿಗೆಗೆ ಹೆಗಲು ನೀಡಬೇಡಿ

ಕಾವಿಯುಡುಗರೆಯುಟ್ಟ ಕರಿಯ ಹೆಗ್ಗಣರಿವರು
ಇವರೆದೆಯ ಅಂಗಳದಿ ಪ್ರೀತಿಯಿಲ್ಲ
ಎದೆತೆರೆದ ಹೂವುಗಳ ದನವಾಗಿ ತಿಂದಿಹರು
ಇವರೆದೆಯ ಗುಡಿಯಲ್ಲಿ ದೇವರಿಲ್ಲ

ಶಿವನೊಬ್ಬನೇ ಸತ್ಯ ಸತ್ಯವೊಂದೇ ಶಿವನು
ಈ ಶವದ ಚಟ್ಟಗಳ ಚಲ್ಲಿಬಿಡಿರಿ
ನೀವು ಆತ್ಮನ ದೀಪ ದೇವದೇವನ ದೀಪ
ಈ ಹುಚ್ಚ ಚಿಮಣಿಗಳ ಚಲ್ಲಿಬಿಡಿರಿ


Previous post ಮಕ್ಕಳು
Next post ರಾಮ ರಾಮ

ಸಣ್ಣ ಕತೆ

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಅನಾವರಣ

    "ಹಲೋ-ಸ್ವೀಟಿ-ಗುಡ್ ಮಾರ್‍ನಿಂಗ್-" ಡಾಕ್ಟರ್ ವಿಜಯಾ ಪ್ರೊಫೆಸರ್‍ಗೆ ವಿಶ್ ಮಾಡಿದಳು. ಆತ್ಮವಿಶ್ವಾಸದ, ಧೈರ್‍ಯ-ಆಸೆ ಭರವಸೆ ಹುಟ್ಟಿಸುವ ಪುಟ್ಟ ತೀಕ್ಷ್ಣವಾದ ಕಣ್ಣುಗಳ ಸ್ವಲ್ಪವೇ ಸ್ಥೂಲಕಾಯದ ಎತ್ತರದ ನಿಲುವಿನ ಮಧ್ಯ ವಯಸ್ಸು… Read more…