Home / ಕವನ / ಕವಿತೆ / ಸ್ವಗತ

ಸ್ವಗತ

ಮುಂಜಾವದ ತಂಪೊತ್ತಿನಲ್ಲಿ
ಕೆಂಪು ಹೃದಯದ ಹುಡುಗಿ
ರಸ್ತೆಯಂಚಿನಲ್ಲಿ ನಿಂತಿದ್ದಾಳೆ.
ಯಾಕೆ? ಎಂದು ಕೇಳಬೇಕು,
ಹೇಗೆ ಕೇಳುವುದು?

ನೆಲವನ್ನು ಜಗ್ಗಿ ಹಿಡಿದಿರುವ ಕಾಲು.
ಸೋತು ತೂಗುತ್ತಿರುವ ಕೈಗಳು.
ದಿಟ್ಟಿಸಿ ದಿಟ್ಟಿಸಿ ಆಳಕ್ಕಿಳಿದಿರುವ ಕಣ್ಣು
ಇವಳನ್ನು ಸಂತೈಸಬೇಕು,
ಹೇಗೆ ಸಂತೈಸುವುದು?

ಹೃದಯ ತುಂಬಿ ತುಳುಕುತ್ತಿದೆ.
ಒಂದಾದರೂ ಹನಿ ಹಂಚಿಕೊಳ್ಳಿ
ಎಂದು ಕಂಡವರ ಕಾಡುತ್ತಿದ್ದಾಳೆ.
ಅವರೋ… ಬೆನ್ನಲ್ಲೆ ಮಾರುತ್ತರ
ಕೊಟ್ಟು ಸಾಗುತ್ತಿದ್ದಾರೆ.
ಇವಳಿಗೆ ಹೇಳಬೇಕು,
ಹೇಗೆ ಹೇಳುವುದು?

ಹೋಗು-
ಆ ತಾರೆಯರು ನಿನ್ನನ್ನು
ಅರ್ಥೈಸಿಕೊಳ್ಳುವರು
ಆ ಮರಗಳು ಅವರೆದೆಯೊಳಗೆ
ನಿನ್ನ ಕರೆದುಕೊಳ್ಳುವರು
ಆ ಚಂದಿರ ನಿನಗೆ ಜತೆಯಾದರೂ
ಆಗಬಹುದು ಎಂದು
ಇವಳಿಗೆ ಹೇಳಬೇಕು.
ಹೇಗೆ ಹೇಳುವುದು?

ಹುಡುಗಿ ಮರದಲ್ಲಿ
ಹೂವಾಗಿ ತೂಗುತ್ತಿದ್ದಾಳೆ.
ತಾರೆಯರು, ಚಂದಿರ,
ಮೋಡಗಳ ಮರೆಯಲ್ಲಿ
ಕುಳಿತು ಬಿಕ್ಕಳಿಸುತ್ತಿದ್ದಾರೆ
ದಳದಳ ಉದುರುತ್ತಿರುವ
ಕಣ್ಣೀರಿನಿಂದ ನೆಲ ಒದ್ದೆಯಾಗಿದೆ

ಹೀಗಾಗಬಾರದಿತ್ತು.


Tagged:

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ