Home / ಕವನ / ಕವಿತೆ / ಇರುಳಿನಲ್ಲಿ ಬೆಳಗು

ಇರುಳಿನಲ್ಲಿ ಬೆಳಗು


ಸರಿರಾತ್ರಿಯಲ್ಲಿ ಹುಡುಗಿ
ಕನಸು ಕಾಣುತ್ತಿದ್ದಾಳೆ.
ಅವಳ ಕನಸು ಹೀಗಿದೆ:

ಪೇಪರಿನವನ ಚರಪರ
ಚಪ್ಪಲಿ ಸದ್ದಿನಲ್ಲಿ
ಹಾಲಿನವನ ಅವಸರದ ಗುದ್ದಿನಲ್ಲಿ
ಇಬ್ಬನಿಯಲ್ಲಿ ತೊಯ್ದ
ಹೂವಿನೊಡತಿಯ ದನಿಯಲ್ಲಿ
ಬೆಳಗಾಗಿದೆ

ಮುಲ್ಲ ಅಲ್ಲಾನಿಗಾಗಿ
ತುಟಿ ಬಿಚ್ಚಿದ್ದಾನೆ
ಮೈಕಾಸುರ ಮಂಜುನಾಥ
ಎಂದು ಕಿವಿ ಕಚ್ಚುತ್ತಿದ್ದಾನೆ.
ಬಂಗಾರದ ರಥ
ರಿಪೇರಿಗೆ ಹೋಗಿದೆ
ಬರಿಗಾಲಲ್ಲೆ ನಡೆದು ಬಂದ
ಸೂರ್ಯನ ಮುಖ ಕೆಂಪಾಗಿದೆ.

ಗಿಡಗಂಟೆಗಳ ಕೊರಳೊಳಗಿಂದ
ಹೊಮ್ಮಿದ ಹಕ್ಕಿಗಳ ಹಾಡನ್ನು
ಆಕಾಶವಾಣಿ ಮರುಪ್ರಸಾರ
ಮಾಡುತ್ತಿದೆ, ಕೇಳಲು
ತುಂಬಾ ಹಿತವಾಗಿದೆ.


‘ಬೆಳಗಾಯ್ತು’ ಎಂದರಚುತ್ತಾ
ಹುಡುಗಿಯ ಅಮ್ಮ
ತಟ್ಟಿ ಎಬ್ಬಿಸುತ್ತಿದ್ದಾಳೆ.

ಹುಡುಗಿ ಕಿವುಡಿ-
ಅವಳಿಗೆ ಸದ್ದುಗದ್ದಲದಲ್ಲಿ
ಬೆಳಗಾಗುವುದಿಲ್ಲ.

ಹುಡುಗಿ ಕುರುಡಿ-
ಅವಳಿಗೆ ವರ್ಣರಂಜಿತ
ಬೆಳಗು ಕಾಣಲಾಗುವುದಿಲ್ಲ.

ಹುಡುಗಿ ಮೂಗಿ-
ಕನಸನ್ನೇಕೆ ಕಸಿದುಕೊಂಡೆ?
ಎಂದವಳು ಅಮ್ಮನನ್ನು
ಕೇಳುವುದಿಲ್ಲ.

ಸದ್ಯಕ್ಕವಳು ಇರುಳಿನಲ್ಲಿ
ಬೆಳಗಿನ ಕನಸು ಕಂಡ
ಖುಷಿಯಲ್ಲಿದ್ದಾಳೆ.


Tagged:

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...