Home / ಕವನ / ಕವಿತೆ / ನಾ…. ಬರುತ್ತೇನೆ ಕೇಳು!

ನಾ…. ಬರುತ್ತೇನೆ ಕೇಳು!

ಒಂದಲ್ಲ ಒಂದು ದಿನ ನಿನ್ನ
ಕನಸಿನಲ್ಲಿ ಸದ್ದಿಲ್ಲದೆ ಸುಳಿದು
ಬರುವವಳೇ…. ನಾನು
ಜಾಡಿಸಿ ಒದ್ದೋಡಿಸಿದರೆ
ಬಾಗಿಲ ಕಟಕಟಾಯಿಸಿವೆನು.
ನಿನ್ನ ಪೊಗರು ಮಾತೆಲ್ಲ ಗಾಳಿಯಲ್ಲಿ
ತೂರಿ ಹೋಗುವ ಹಾಗೆ ಗೆಜ್ಜೆ-
ಝಣಗುಟ್ಟಿಸುವೆನು, ಕಣ್-
ತಪ್ಪಿಸಿಯಾದರೂ ಒಳನುಗ್ಗುವೆನು.

‘ಹಠಮಾರಿ ಹೆಣ್ಣು’ ಎಂದು
ಅನ್ನುವಿಯಾದರೆ ಅನ್ನು, ಆದರೆ
ಅತ್ತಿಂದಿತ್ತ ಗೋಣಾಡಿಸಿ ಮಾತ್ರ
ತುಂಟ ಕಂಗಳಿಗೆ ಎರಚದಿರು ಮಣ್ಣು,
ದಯವಿಟ್ಟು ದಯೆಯಿಟ್ಟು ದಾರಿಬಿಡು.
ಕೆಣಕದೆ, ಒಳಗೇನಿದೆಯೆಂದು
ಇಣುಕಿ ನೋಡುವೆನು, ಗುಲಾಬಿ
ಮೃದುಪಾದದ ಹೆಜ್ಜೆಯಿಟ್ಟು
ನೋವಾಗದ ಹಾಗೆ ನಡೆದಾಡುವೆನು.
ಖಾಲಿಯೆನಿಸಿದರೆ ಒಂದಿಷ್ಟು
ಹಸಿರ ಬೆಳಸುವೆನು.

ನೋಡು: ನಾಳಿನ ದಿನ ಕಣ್ಣ ಪೊರೆ
ಕಳಚಿ, ನೆನಪು ನಿಚ್ಚಳವಾಗಿ,
ಮಸುಕು ಹೆಜ್ಜೆಯನ್ನಪ್ಪಿ, ನೀ…
ಬಿಕ್ಕಳಿಸುವಾಗ ಸಾವಿರ ಮೈಲುಗಳಾಚೆ
ಸಮಶೃತಿಯಲ್ಲಿ ನುಡಿಯಬಹುದು
ನನ್ನ ಗೆಜ್ಜೆಯ ಗುನುಗು.

ಆಗ: ಬಾಜಾ-ಬಜಂತ್ರಿ ನುಡಿಸಿ
‘ಸುಸ್ವಾಗತ’ ಫಲಕ ತೂಗು ಹಾಕಿದರೂ
ತಿರುಗಿ ನೋಡುವವಳಲ್ಲ ನಾನು.
ಎರಡೂ ಕೈ ಚಾಚಿ ‘ಬಾ’ ಎಂದು
ಕರೆದರೂ ಬರುವವಳಲ್ಲ ನಾನು
ಬರಬೇಕೆನಿಸಿದರೂ ಬರಲಾಗುವುದಿಲ್ಲ ಕೇಳು!
ಹಿಂದಿರುಗಿ ಬರಲಾರದಷ್ಟು ದೂರ
ಹೋದ ಮೇಲೆ ಹೇಗೆ ಬರುವುದು ಹೇಳು?


Tagged:

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...