Home / ಕವನ / ಕವಿತೆ / ಪದ್ಯವಾಗಲಿಲ್ಲ

ಪದ್ಯವಾಗಲಿಲ್ಲ

ಕಡಲ ಕಪ್ಪೊಳಗೆ
ನಕ್ಷತ್ರಗಳು ಅರಳಿದ್ದವು
ಒಂಟಿ ಮೋಡಗಳು
ರೆಕ್ಕೆ ಬೀಸುತ್ತಿದ್ದವು,
ಚಂದಿರ ಈಸುತ್ತಿದ್ದ.

ಸಾವಿರ ಸಾವಿರ ಹಳ್ಳಕೊಳ್ಳಗಳು
ಕಡಲನ್ನು ಹೆಣೆದವು.
ಅದೇ ಕಡಲು ಹೊಳೆಯಾಗಿ
ಹಾಳೆಯ ಮೇಲೆ ಹನಿದು, ಹರಿದು
ಪದ್ಯವಾಯಿತು.

ಕಪ್ಪು ಕಡಲ ಮೊಗದಲ್ಲಿ
ಕಣ್ಣುಗಳು ನಕ್ಷತ್ರಗಳಂತೆ ಅರಳಿದ್ದವು.
ಮುಂಗುರುಳು ರೆಕ್ಕೆ ಬೀಸುವ
ಒಂಟಿ ಮೋಡಗಳ ಹಾಗೆ
ತುಟಿಯಂಚಿನಲ್ಲಿ ಬೆಳದಿಂಗಳ ನಗೆ.

ಕಣ್ಣು, ತುಟಿ, ಮುಂಗುರುಳು
ಹೊಳೆಹೊಳೆದು ಹಾಳೆಯ ಮೇಲೆ
ಪದ್ಯವಾಯಿತು.

ತಾರೆಯರು, ಮೋಡಗಳು
ಪದ್ಯವಾದವು,
ಕಣ್ಣುಗಳು, ಮುಂಗುರುಳು
ಪದ್ಯವಾದವು.

ಪದ್ಯವಾಗಬೇಕು ಅಂತ
ನನಗೂ ಅನಿಸಿತು
ಕಡಲ ಕನ್ನಡಿಯೊಳಗೆ ಇಣುಕಿದೆ
ಬಿಂಬಿ ಕಾಣಲಿಲ್ಲ.
ಕಣ್ಣ ಕನ್ನಡಿಯೊಳಗೆ ಇಣುಕಿದೆ
ನನ್ನ ಬಿಂಬವಾಗಿರಲಿಲ್ಲ.

ನಾನು ಪದ್ಯವಾಗಲಿಲ್ಲ.


Tagged:

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...