ಆರತಿಯನು ಎತ್ತಿರೆ ಸದ್ಭಕ್ತರೆಲ್ಲರು

ಆರತಿಯನು ಎತ್ತಿರೆ ಸದ್ಭಕ್ತರೆಲ್ಲರು || ಪ ||

ಆರತಿಯನು ಎತ್ತಿರೆ
ಈರತಿಗೆ ರತಿಯಿಟ್ಟು ಸಾಕ್ಷಾತ
ಸಾರುತಿರೆ ಶ್ರುತಿಗಳು ಸದ್ಗುರು
ಚಾರುತರ ಕೀರತಿಯ ಪೋಲ್ವಗೆ || ೧ ||

ಜ್ಯೋತಿತ್ರಯಕೆ ತಳಗಿ ಮೇಲಕೆ ಆತು
ಬತ್ತಿಗಳೈದು ಎಡಬಲ
ಆತುರಿವ ಸುಜ್ಞಾನ ತೈಲವ
ನೀಡಿ ನೀಲಾಂಜನವ ಜಾಚುತ || ೨ ||

ಗಂಧ ಚಂದನ ಧರಿಸಿ ಕರ್ಪುರ
ವಂದೆ ಮನದಲಿ ಸುಟ್ಟು ಶೀಘ್ರದಿ
ವಂದಿಸುತ ನಿಜಬೋಧ ನಿತ್ಯಾ-
ನಂದದೊಳು ನಿರ್ಬೈಲ ಮೂರ್ತಿಗೆ || ೩ ||

ಸಾಲು ದೀವಿಗೆ ಕುಡಿಯ ಮಧ್ಯದಿ
ಲೋಲ ನಡುವಿನ ಆರುಣಕಿರಣದ
ಆಲಯದ ಗದ್ದಿಗೆಯೊಳೊಪ್ಪುವ
ಕಾಲಹರನಿಗೆ ಕೈ ಮುಗಿಯುತ || ೪ ||

ಪಿಡಿದು ನೀಲಾಂಜನ ಪ್ರಕಾಶವ
ತಡೆದು ತವಕದಿ ಸೂರ್ಯಮಂತ್ರವ
ನುಡಿದು ಶಿಶುನಾಳೇಶನಡಿಯೊಳು
ಬಿಡದ ಮನ ಮುಡಪಿಟ್ಟು ಮೌನದಿ || ೫ ||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶ್ರೀ ಫಕ್ಕೀರಸ್ವಾಮಿ ಶಿವಯೋಗಿ ಸಮರ್ಥ
Next post ಜಯವೆನುತ ಕೈಮುಗಿದು ನಮಿಸುವೆ

ಸಣ್ಣ ಕತೆ

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

cheap jordans|wholesale air max|wholesale jordans|wholesale jewelry|wholesale jerseys