Home / ಕವನ / ಕವಿತೆ / ಅಳಿವು-ಉಳಿವು

ಅಳಿವು-ಉಳಿವು

ಬೀಜ ಬೇರೂರಿ
ಕುಡಿ ಇಡುತ್ತಿರುವಾಗಲೇ
ಹತ್ತಿಕೊಂಡಿತ್ತು ಗೆದ್ದಲು
ಬಿಡಿಸಿಕೊಳ್ಳಲು ಹರಸಾಹಸಗೈದರೂ
ತಪ್ಪಿಸಿಕೊಳ್ಳಲು ಆಗಲೇ ಇಲ್ಲ

ಗೆದ್ದಲು ಹಿಡಿದ ಬೀಜ
ಸಾಯುವುದೇ ದಿಟ
ಎಂದುಕೊಂಡರೂ ಹಾಗಾಗಲಿಲ್ಲ
ಉಳಿವಿಗಾಗಿ ಹೋರಾಟ
ತುಸು ಉಸಿರುವವರೆಗೂ
ಚಿಗುರಿಕೊಂಡಿತು
ಬೀಜ ಮೆಲ್ಲನೆ ಗಿಡವಾಗಿ
ಆದರೆ,

“ಒಬ್ಬನ ಕತ್ತು ಇನ್ನೊಬ್ಬನ ತುತ್ತು”
ಹಿಡಿದ ಬೀಜದ ಬಿಡಲೊಲ್ಲದ
ಗೆದ್ದಲು ಕಾಯತೊಡಗಿತ್ತು
ಸಸಿಯ ಕ್ಷೀಣ ಕಾಲವ

ದಿನಕಳೆದಂತೆ ಬತ್ತಿದ ಉತ್ಸಾಹ
ಕುಗ್ಗಿದ ಹುಮ್ಮಸ್ಸು
ಆಸೆಕುಂದಿದ ಸಸಿ
ಬಲಿಯಾಗಿತ್ತು ಗೆದ್ದಲ ಬಾಯಿಗೆ
“ಸಬಲರ ಉಳಿವು ದುರ್ಬಲರ ಅಳಿವು”
ಪ್ರಕೃತಿ ನಿಯಮ

ಬಲಿಮೆದ್ದು ಹಿರಿಮೆಯಲ್ಲಿ
ಮೆರೆದಿತ್ತು ಗೆದ್ದಲು
ಹುತ್ತವ ಮಾಡಿ
ಹೂಡಿತ್ತು ಸಂಸಾರ

ಆದರೆ
ಉರಗವೊಂದು ತೆವಳಿ
ಬಂದಿತ್ತು ನೋಡಿ
ಗೆದ್ದಲ ಗೂಡು
ದಿನ ನಾಲ್ಕು ದೂಡಬಹುದು
ಕಷ್ಟವಿಲ್ಲದೆ ಪಾಡು
ನಡೆಸಿತ್ತು ಗೆದ್ದಲ
ಕೂಡು ಕುಟುಂಬದ
ಮಾರಣ ಹೋಮ

“ಕಾಲಾಯ ತಸ್ಮೈ ನಮಃ”


Tagged:

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...