Home / ಲೇಖನ / ವಿಜ್ಞಾನ / ಐನ್‌ಸ್ಟನ್ ಮಿದುಳಿನ ಬುದ್ಧಿವಂತಿಕೆಯ ರಹಸ್ಯ!

ಐನ್‌ಸ್ಟನ್ ಮಿದುಳಿನ ಬುದ್ಧಿವಂತಿಕೆಯ ರಹಸ್ಯ!

ವಿಶ್ವವಿಖ್ಯಾತ ವಿಜ್ಞಾನಿ ಐನ್‍ಸ್ಟನ್ ಅವರ ಹೆಸರನ್ನು ವಿಜ್ಞಾನ ರಂಗದಲ್ಲಿ ಕೇಳದವರೇ ಇಲ್ಲ. ಇವರ ಚಿಂತನ, ಪ್ರಯೋಗ, ಸಿದ್ಧಾಂತ ಮತ್ತು ಸಂಶೋಧನೆಗಳು ಜಗತ್ತಿಗೆ ಇಂದು ಮಾರ್ಗದರ್ಶಿಯಾಗಿವೆ. ಇಂತಹ ಐನ್‌ಸ್ಟನ್ ಅವರ ತಲೆಯೊಳಗಿನ ಮಿದುಳೇನಾದರೂ ವಿಶೇಷತೆಗಳಿಂದ ಕೂಡಿದೆಯೇ? ಎಂದು ಇವರ ಮಿದುಳಿನ ಅಧ್ಯಯನವನ್ನು ಸಾಂಡ್ರಾ ಬಿ ಟೆಲ್ಸನ್ ಅವರು ನಡೆಯಿಸಿ ಅವರು ಹಲವು ಅಭಿಪ್ರಾಯಗಳನ್ನು ದೃಢಪಡಿಸಿದ್ದಾರೆ ಮತ್ತು ‘ಲಾನ್ಸೆಟ್’ ಪತ್ರಿಕೆಯಲ್ಲಿ ಐನ್‌ಸ್ಪನ್ ಬುದ್ಧಿಶಕ್ತಿಗೆ ಇವರ ಮಿದುಳೇ ಕಾರಣವೆಂದು ಹೇಳಿದ್ದಾರೆ.

೧೯೫೫ ರಲ್ಲಿ ತಮ್ಮ ೭೬ ನೇ ವಯಸ್ಸಿನಲ್ಲಿ ಮಿದುಳಿನ ರಕ್ತಸ್ರಾವದಿಂದ ಪ್ರಾಣಬಿಟ್ಟಿದ್ದರು. ಇವರ ಶವ, ಪರೀಕ್ಷೆ ಮಾಡಿದ ವೈದ್ಯ ಥಾಮಸ್ ಹಾರ್ವೇಗೆ ತನ್ನ ಮರಣಾಂತರ ತನ್ನ ಮಿದುಳಿನ ಪರೀಕ್ಷೆ ಮಾಡಬಹುದೆಂದು ಐನ್‌ಸ್ಟನ್ ಹೇಳಿದ್ದರ ಮೇರೆಗೆ ಅವರ ಮಿದುಳನ್ನು ಹೊರತೆಗೆದು ಅದನ್ನು ೮-೧೦ ಹೋಳುಗಳನ್ನಾಗಿ ಮಾಡಿ ಕೆಡದಂತೆ ಪಾರ್ಮಾಲ್ಡಿ ಹೈಡ್ ದ್ರವದಲ್ಲಿ ಅದ್ದಿ
ಉಪ್ಪಿನಕಾಯಿಯ ರೀತಿ ಒಂಡು ಬಾಟಲಿಯಲ್ಲಿ ರಕ್ಷಿಸಿದ್ದರು.

ಆಂಟಾರಿಯೋದ ಹ್ಯಾಮಿಲ್ಟನ್‌ನ ಮ್ಯಾಕ್ ಮಾಸ್ಪರ್ ವಿಶ್ವವಿದ್ಯಾಲಯದ ತಮ್ಮ ಸಹೋದ್ಯೋಗಿಗಳ ಜತೆಗೂಡಿ ಐನ್‌ಸ್ಟನ್ ಅವರ ಮೆದುಳಿನ ಅಧ್ಯಯನ ನಡೆಯಿಸಿದ ಸಾಂಡ್ರಾ ಅವರು ಸಾಮಾನ್ಯ ಬುದ್ಧಿಮತ್ತೆಯನ್ನು ಹೊಂದಿದ ೩೫-ಪುರುಷರು, ೫೬-ಮಹಿಳೆಯರ ಮಿದುಳಿನ ಜತೆಗೆ ಐನ್‌ಸ್ಟನ್ ಅವರ ಮೆದುಳನ್ನು ಹೋಲಿಸಿ ಅಧ್ಯಯನ ನಡೆಯಿಸಿದರು. ಐನ್‌ಸ್ಟನ್ ಅವರ ಮೆದುಳು ಸಾಮಾನ್ಯರ ಮೆದುಳಂತೆ ಇದೆಯಾದರೂ ಸಾಮಾನ್ಯ ಜನರಲ್ಲಿರುವಂತೆ ಪೆರಿಟರ್ ಅಸರ್‌ಕ್ಯೂಲಮ್ ಇಲ್ಲದಿರುವುದು ಮೆದುಳಿನ ಎರಡು ಕಡೆಗಿರುವ ಇನ್‌ಪೆರಿಯರ್ ಪೆರಿಟರ್ ಭಾಗ ವಿಜ್ಞಾನಿಯ ಮೆದುಳಲ್ಲಿ ವಿಸ್ತಾರವಾಗಿ ಬೆಳೆದಿದ್ದು ಇದು ಮಿದುಳಿನ ಎರಡು ದಿಕ್ಕಿಗೆ ಶೇ.೧೫ ರಷ್ಟು ಹೆಚ್ಚಿನ ಭಾಗಕ್ಕೆ ವಿಸ್ತರಿಸಿದ್ದರಿಂದ ಐನ್‍ಸ್ಟನ್ ಅವರ ಅಪಾರ ಬುದ್ಧಿಮತ್ತೆಗೆ ಕಾರಣವಾಗಿರಬಹುದೆಂದು ಸಂಶೋಧಕರು ವಾದಿಸುತ್ತಾರೆ. ಸಾಮಾನ್ಯವಾಗಿ ಎಲ್ಲರ ಮೆದುಳಲ್ಲೂ ಮಧ್ಯದಲ್ಲೊಂದು ಗೀರು ಇರುತ್ತದೆ. ಇದ್ಗು ನೆತ್ತಿಯ ಮೂಲಕ ಮೆದುಳಿನ ಹಿಂಭಾಗಕ್ಕೆ ಕತ್ತಿನವರೆಗೂ ಇರುತ್ತದೆ. ಆದರೆ ಇವರ ಮಿದುಳಿನಲ್ಲಿ ಆಗೀರು ಹಿಂಭಾಗಕ್ಕೆ ಬಂದಿರುವುದಿಲ್ಲ. ಬೇರೆಯಾವ ಮಿದುಳಿನಲ್ಲಿಯೂ ಕಾಣದ ಅಪರೂಪದ ಲಕ್ಷಣ ಇದಾಗಿದೆ. ಇಲ್ಲಿ ನರತಂತುಗಳು ಪರಸ್ಪರ ಬೆಸುಗೆಯಾಗಿರುವ ಸಾಧ್ಯತೆ ಹೆಚ್ಚಾಗಿದೆ. ಇದರಿಂದಾಗಿ ನರಸಂದೇಶಗಳ ವಿನಿಮಯ ಚುರುಕಾಗಿರುವ ಸಾಧ್ಯತೆಗಳೇ ಹೆಚ್ಚು ಎಂದು ಹೇಳುತ್ತ ಈ ಕಾರಣವಾಗಿ ಇವರ ಬುದ್ಧಿಶಕ್ತಿಗೆ ಇದೇ ಕಾರಣವೆಂದು ವಾದಿಸುತ್ತಾರೆ.
*

Tagged:

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...