Home / ಲೇಖನ / ವಿಜ್ಞಾನ / ಐನ್‌ಸ್ಟನ್ ಮಿದುಳಿನ ಬುದ್ಧಿವಂತಿಕೆಯ ರಹಸ್ಯ!

ಐನ್‌ಸ್ಟನ್ ಮಿದುಳಿನ ಬುದ್ಧಿವಂತಿಕೆಯ ರಹಸ್ಯ!

ವಿಶ್ವವಿಖ್ಯಾತ ವಿಜ್ಞಾನಿ ಐನ್‍ಸ್ಟನ್ ಅವರ ಹೆಸರನ್ನು ವಿಜ್ಞಾನ ರಂಗದಲ್ಲಿ ಕೇಳದವರೇ ಇಲ್ಲ. ಇವರ ಚಿಂತನ, ಪ್ರಯೋಗ, ಸಿದ್ಧಾಂತ ಮತ್ತು ಸಂಶೋಧನೆಗಳು ಜಗತ್ತಿಗೆ ಇಂದು ಮಾರ್ಗದರ್ಶಿಯಾಗಿವೆ. ಇಂತಹ ಐನ್‌ಸ್ಟನ್ ಅವರ ತಲೆಯೊಳಗಿನ ಮಿದುಳೇನಾದರೂ ವಿಶೇಷತೆಗಳಿಂದ ಕೂಡಿದೆಯೇ? ಎಂದು ಇವರ ಮಿದುಳಿನ ಅಧ್ಯಯನವನ್ನು ಸಾಂಡ್ರಾ ಬಿ ಟೆಲ್ಸನ್ ಅವರು ನಡೆಯಿಸಿ ಅವರು ಹಲವು ಅಭಿಪ್ರಾಯಗಳನ್ನು ದೃಢಪಡಿಸಿದ್ದಾರೆ ಮತ್ತು ‘ಲಾನ್ಸೆಟ್’ ಪತ್ರಿಕೆಯಲ್ಲಿ ಐನ್‌ಸ್ಪನ್ ಬುದ್ಧಿಶಕ್ತಿಗೆ ಇವರ ಮಿದುಳೇ ಕಾರಣವೆಂದು ಹೇಳಿದ್ದಾರೆ.

೧೯೫೫ ರಲ್ಲಿ ತಮ್ಮ ೭೬ ನೇ ವಯಸ್ಸಿನಲ್ಲಿ ಮಿದುಳಿನ ರಕ್ತಸ್ರಾವದಿಂದ ಪ್ರಾಣಬಿಟ್ಟಿದ್ದರು. ಇವರ ಶವ, ಪರೀಕ್ಷೆ ಮಾಡಿದ ವೈದ್ಯ ಥಾಮಸ್ ಹಾರ್ವೇಗೆ ತನ್ನ ಮರಣಾಂತರ ತನ್ನ ಮಿದುಳಿನ ಪರೀಕ್ಷೆ ಮಾಡಬಹುದೆಂದು ಐನ್‌ಸ್ಟನ್ ಹೇಳಿದ್ದರ ಮೇರೆಗೆ ಅವರ ಮಿದುಳನ್ನು ಹೊರತೆಗೆದು ಅದನ್ನು ೮-೧೦ ಹೋಳುಗಳನ್ನಾಗಿ ಮಾಡಿ ಕೆಡದಂತೆ ಪಾರ್ಮಾಲ್ಡಿ ಹೈಡ್ ದ್ರವದಲ್ಲಿ ಅದ್ದಿ
ಉಪ್ಪಿನಕಾಯಿಯ ರೀತಿ ಒಂಡು ಬಾಟಲಿಯಲ್ಲಿ ರಕ್ಷಿಸಿದ್ದರು.

ಆಂಟಾರಿಯೋದ ಹ್ಯಾಮಿಲ್ಟನ್‌ನ ಮ್ಯಾಕ್ ಮಾಸ್ಪರ್ ವಿಶ್ವವಿದ್ಯಾಲಯದ ತಮ್ಮ ಸಹೋದ್ಯೋಗಿಗಳ ಜತೆಗೂಡಿ ಐನ್‌ಸ್ಟನ್ ಅವರ ಮೆದುಳಿನ ಅಧ್ಯಯನ ನಡೆಯಿಸಿದ ಸಾಂಡ್ರಾ ಅವರು ಸಾಮಾನ್ಯ ಬುದ್ಧಿಮತ್ತೆಯನ್ನು ಹೊಂದಿದ ೩೫-ಪುರುಷರು, ೫೬-ಮಹಿಳೆಯರ ಮಿದುಳಿನ ಜತೆಗೆ ಐನ್‌ಸ್ಟನ್ ಅವರ ಮೆದುಳನ್ನು ಹೋಲಿಸಿ ಅಧ್ಯಯನ ನಡೆಯಿಸಿದರು. ಐನ್‌ಸ್ಟನ್ ಅವರ ಮೆದುಳು ಸಾಮಾನ್ಯರ ಮೆದುಳಂತೆ ಇದೆಯಾದರೂ ಸಾಮಾನ್ಯ ಜನರಲ್ಲಿರುವಂತೆ ಪೆರಿಟರ್ ಅಸರ್‌ಕ್ಯೂಲಮ್ ಇಲ್ಲದಿರುವುದು ಮೆದುಳಿನ ಎರಡು ಕಡೆಗಿರುವ ಇನ್‌ಪೆರಿಯರ್ ಪೆರಿಟರ್ ಭಾಗ ವಿಜ್ಞಾನಿಯ ಮೆದುಳಲ್ಲಿ ವಿಸ್ತಾರವಾಗಿ ಬೆಳೆದಿದ್ದು ಇದು ಮಿದುಳಿನ ಎರಡು ದಿಕ್ಕಿಗೆ ಶೇ.೧೫ ರಷ್ಟು ಹೆಚ್ಚಿನ ಭಾಗಕ್ಕೆ ವಿಸ್ತರಿಸಿದ್ದರಿಂದ ಐನ್‍ಸ್ಟನ್ ಅವರ ಅಪಾರ ಬುದ್ಧಿಮತ್ತೆಗೆ ಕಾರಣವಾಗಿರಬಹುದೆಂದು ಸಂಶೋಧಕರು ವಾದಿಸುತ್ತಾರೆ. ಸಾಮಾನ್ಯವಾಗಿ ಎಲ್ಲರ ಮೆದುಳಲ್ಲೂ ಮಧ್ಯದಲ್ಲೊಂದು ಗೀರು ಇರುತ್ತದೆ. ಇದ್ಗು ನೆತ್ತಿಯ ಮೂಲಕ ಮೆದುಳಿನ ಹಿಂಭಾಗಕ್ಕೆ ಕತ್ತಿನವರೆಗೂ ಇರುತ್ತದೆ. ಆದರೆ ಇವರ ಮಿದುಳಿನಲ್ಲಿ ಆಗೀರು ಹಿಂಭಾಗಕ್ಕೆ ಬಂದಿರುವುದಿಲ್ಲ. ಬೇರೆಯಾವ ಮಿದುಳಿನಲ್ಲಿಯೂ ಕಾಣದ ಅಪರೂಪದ ಲಕ್ಷಣ ಇದಾಗಿದೆ. ಇಲ್ಲಿ ನರತಂತುಗಳು ಪರಸ್ಪರ ಬೆಸುಗೆಯಾಗಿರುವ ಸಾಧ್ಯತೆ ಹೆಚ್ಚಾಗಿದೆ. ಇದರಿಂದಾಗಿ ನರಸಂದೇಶಗಳ ವಿನಿಮಯ ಚುರುಕಾಗಿರುವ ಸಾಧ್ಯತೆಗಳೇ ಹೆಚ್ಚು ಎಂದು ಹೇಳುತ್ತ ಈ ಕಾರಣವಾಗಿ ಇವರ ಬುದ್ಧಿಶಕ್ತಿಗೆ ಇದೇ ಕಾರಣವೆಂದು ವಾದಿಸುತ್ತಾರೆ.
*

Tagged:

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...