Home / ಲೇಖನ / ವಿಜ್ಞಾನ / ಐನ್‌ಸ್ಟನ್ ಮಿದುಳಿನ ಬುದ್ಧಿವಂತಿಕೆಯ ರಹಸ್ಯ!

ಐನ್‌ಸ್ಟನ್ ಮಿದುಳಿನ ಬುದ್ಧಿವಂತಿಕೆಯ ರಹಸ್ಯ!

ವಿಶ್ವವಿಖ್ಯಾತ ವಿಜ್ಞಾನಿ ಐನ್‍ಸ್ಟನ್ ಅವರ ಹೆಸರನ್ನು ವಿಜ್ಞಾನ ರಂಗದಲ್ಲಿ ಕೇಳದವರೇ ಇಲ್ಲ. ಇವರ ಚಿಂತನ, ಪ್ರಯೋಗ, ಸಿದ್ಧಾಂತ ಮತ್ತು ಸಂಶೋಧನೆಗಳು ಜಗತ್ತಿಗೆ ಇಂದು ಮಾರ್ಗದರ್ಶಿಯಾಗಿವೆ. ಇಂತಹ ಐನ್‌ಸ್ಟನ್ ಅವರ ತಲೆಯೊಳಗಿನ ಮಿದುಳೇನಾದರೂ ವಿಶೇಷತೆಗಳಿಂದ ಕೂಡಿದೆಯೇ? ಎಂದು ಇವರ ಮಿದುಳಿನ ಅಧ್ಯಯನವನ್ನು ಸಾಂಡ್ರಾ ಬಿ ಟೆಲ್ಸನ್ ಅವರು ನಡೆಯಿಸಿ ಅವರು ಹಲವು ಅಭಿಪ್ರಾಯಗಳನ್ನು ದೃಢಪಡಿಸಿದ್ದಾರೆ ಮತ್ತು ‘ಲಾನ್ಸೆಟ್’ ಪತ್ರಿಕೆಯಲ್ಲಿ ಐನ್‌ಸ್ಪನ್ ಬುದ್ಧಿಶಕ್ತಿಗೆ ಇವರ ಮಿದುಳೇ ಕಾರಣವೆಂದು ಹೇಳಿದ್ದಾರೆ.

೧೯೫೫ ರಲ್ಲಿ ತಮ್ಮ ೭೬ ನೇ ವಯಸ್ಸಿನಲ್ಲಿ ಮಿದುಳಿನ ರಕ್ತಸ್ರಾವದಿಂದ ಪ್ರಾಣಬಿಟ್ಟಿದ್ದರು. ಇವರ ಶವ, ಪರೀಕ್ಷೆ ಮಾಡಿದ ವೈದ್ಯ ಥಾಮಸ್ ಹಾರ್ವೇಗೆ ತನ್ನ ಮರಣಾಂತರ ತನ್ನ ಮಿದುಳಿನ ಪರೀಕ್ಷೆ ಮಾಡಬಹುದೆಂದು ಐನ್‌ಸ್ಟನ್ ಹೇಳಿದ್ದರ ಮೇರೆಗೆ ಅವರ ಮಿದುಳನ್ನು ಹೊರತೆಗೆದು ಅದನ್ನು ೮-೧೦ ಹೋಳುಗಳನ್ನಾಗಿ ಮಾಡಿ ಕೆಡದಂತೆ ಪಾರ್ಮಾಲ್ಡಿ ಹೈಡ್ ದ್ರವದಲ್ಲಿ ಅದ್ದಿ
ಉಪ್ಪಿನಕಾಯಿಯ ರೀತಿ ಒಂಡು ಬಾಟಲಿಯಲ್ಲಿ ರಕ್ಷಿಸಿದ್ದರು.

ಆಂಟಾರಿಯೋದ ಹ್ಯಾಮಿಲ್ಟನ್‌ನ ಮ್ಯಾಕ್ ಮಾಸ್ಪರ್ ವಿಶ್ವವಿದ್ಯಾಲಯದ ತಮ್ಮ ಸಹೋದ್ಯೋಗಿಗಳ ಜತೆಗೂಡಿ ಐನ್‌ಸ್ಟನ್ ಅವರ ಮೆದುಳಿನ ಅಧ್ಯಯನ ನಡೆಯಿಸಿದ ಸಾಂಡ್ರಾ ಅವರು ಸಾಮಾನ್ಯ ಬುದ್ಧಿಮತ್ತೆಯನ್ನು ಹೊಂದಿದ ೩೫-ಪುರುಷರು, ೫೬-ಮಹಿಳೆಯರ ಮಿದುಳಿನ ಜತೆಗೆ ಐನ್‌ಸ್ಟನ್ ಅವರ ಮೆದುಳನ್ನು ಹೋಲಿಸಿ ಅಧ್ಯಯನ ನಡೆಯಿಸಿದರು. ಐನ್‌ಸ್ಟನ್ ಅವರ ಮೆದುಳು ಸಾಮಾನ್ಯರ ಮೆದುಳಂತೆ ಇದೆಯಾದರೂ ಸಾಮಾನ್ಯ ಜನರಲ್ಲಿರುವಂತೆ ಪೆರಿಟರ್ ಅಸರ್‌ಕ್ಯೂಲಮ್ ಇಲ್ಲದಿರುವುದು ಮೆದುಳಿನ ಎರಡು ಕಡೆಗಿರುವ ಇನ್‌ಪೆರಿಯರ್ ಪೆರಿಟರ್ ಭಾಗ ವಿಜ್ಞಾನಿಯ ಮೆದುಳಲ್ಲಿ ವಿಸ್ತಾರವಾಗಿ ಬೆಳೆದಿದ್ದು ಇದು ಮಿದುಳಿನ ಎರಡು ದಿಕ್ಕಿಗೆ ಶೇ.೧೫ ರಷ್ಟು ಹೆಚ್ಚಿನ ಭಾಗಕ್ಕೆ ವಿಸ್ತರಿಸಿದ್ದರಿಂದ ಐನ್‍ಸ್ಟನ್ ಅವರ ಅಪಾರ ಬುದ್ಧಿಮತ್ತೆಗೆ ಕಾರಣವಾಗಿರಬಹುದೆಂದು ಸಂಶೋಧಕರು ವಾದಿಸುತ್ತಾರೆ. ಸಾಮಾನ್ಯವಾಗಿ ಎಲ್ಲರ ಮೆದುಳಲ್ಲೂ ಮಧ್ಯದಲ್ಲೊಂದು ಗೀರು ಇರುತ್ತದೆ. ಇದ್ಗು ನೆತ್ತಿಯ ಮೂಲಕ ಮೆದುಳಿನ ಹಿಂಭಾಗಕ್ಕೆ ಕತ್ತಿನವರೆಗೂ ಇರುತ್ತದೆ. ಆದರೆ ಇವರ ಮಿದುಳಿನಲ್ಲಿ ಆಗೀರು ಹಿಂಭಾಗಕ್ಕೆ ಬಂದಿರುವುದಿಲ್ಲ. ಬೇರೆಯಾವ ಮಿದುಳಿನಲ್ಲಿಯೂ ಕಾಣದ ಅಪರೂಪದ ಲಕ್ಷಣ ಇದಾಗಿದೆ. ಇಲ್ಲಿ ನರತಂತುಗಳು ಪರಸ್ಪರ ಬೆಸುಗೆಯಾಗಿರುವ ಸಾಧ್ಯತೆ ಹೆಚ್ಚಾಗಿದೆ. ಇದರಿಂದಾಗಿ ನರಸಂದೇಶಗಳ ವಿನಿಮಯ ಚುರುಕಾಗಿರುವ ಸಾಧ್ಯತೆಗಳೇ ಹೆಚ್ಚು ಎಂದು ಹೇಳುತ್ತ ಈ ಕಾರಣವಾಗಿ ಇವರ ಬುದ್ಧಿಶಕ್ತಿಗೆ ಇದೇ ಕಾರಣವೆಂದು ವಾದಿಸುತ್ತಾರೆ.
*

Tagged:

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...