Home / ಕವನ / ಕವಿತೆ / ಮುಖವಾಡ

ಮುಖವಾಡ

ನಾವೇಕೆ ಹೀಗೆ ಮುಖವಾಡಧಾರಿಗಳು
ಎದುರಿನಲ್ಲಿ ಹೊಗಳಿಕೆ-ಹೊನ್ನಶೂಲದ ತಿಮಿತ
ಹಿಂದೆ-ವ್ಯಂಗ್ಯಕಟಕಿ ಕುಹಕ
ಪವಿತ್ರ ಸ್ನೇಹಕ್ಕೆ ಕೊರತೆಯೇ?

ನಮ್ಮ ನಗುವೇಕೆ ಹೀಗೆ?
ತುಟಿ ತೆರೆದು, ಹಲ್ಲು ತೋರಿಸಿ ವಕ್ರ
ನಗೆ ಬಿರಿದು, ಸ್ನೇಹಸ್ಮಿತವಲ್ಲ ಅದು
ಅಣಕು ನಗುವೇ?

ನಮ್ಮ ಮನಸ್ಸೇಕೆ ಹೀಗೆ?
ಪಾಚಿಗಟ್ಟಿದ ಹೊಲಸು ನೀರಿನ ಹಾಗೆ
ರೊಚ್ಚೆ ತುಂಬಿದ ಕೊಚ್ಚೆಯ ಹಾಗೆ
ದ್ವೇಷದಿಂದ ಮೆರೆಯುತ್ತ
ಪ್ರೀತಿ, ಅಭಿಮಾನ ಕೊಲ್ಲುತ್ತ
ನೆರೆಹೊರೆಗೆ ಸಹಕರಿಸದೆ
ಬದುಕು ಸವೆಸುತ್ತಾ
ಸದ್ಭಾವನೆಯ ಕೊರತೆಯೇ?

ನಾವೇಕೆ ಹೀಗೆ ಪರಿಚತರಾದರೂ
ಪರಸ್ಪರ ಅಪರಿಚಿತರಂತೆ?
ಸಂಬಂಧಗಳನ್ನೇ ಮರೆತವರಂತೆ
ಕಟ್ಟಿಕೊಳ್ಳುತ್ತಿದ್ದೇವೆ ಕೋಟೆ
ಸುತ್ತಲೂ ಜೇಡನಂತೆ
ಸಾಮರಸ್ಯದ ಕೊರತೆಯೇ?

ಆಗಬಾರದೇ ನಾವೆಲ್ಲ
ನಮ್ಮ ಪೂರ್ವಿಕರಂತೆ
ಆದರ್ಶಗಳ ಪಾಲಕರಂತೆ
ಅತಿಥಿಗಳ ಪೂಜಿಸಿ,
ಸ್ನೇಹಿತರ ಆಧರಿಸಿ
ದೀನರಿಗೆ ಬೆಂಬಲಿಸಿ
ಎಲ್ಲರೊಳಗೊಂದಾಗಿ-ಮುಖವಾಡ ಸರಿಸಿ
ನಿಜವಾದ ಮನುಜರಂತೆ

*****

Tagged:

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...