Home / ಕವನ / ಕವಿತೆ / ವಿಪರ್ಯಾಸಗಳು

ವಿಪರ್ಯಾಸಗಳು

ಅಲ್ಲಿ ವಿದ್ವತ್ತಿನದೇ ಮೇಲುಗೈ
ದ್ವೈತಕ್ಕೂ ಅಲ್ಲ, ಅದ್ವೈತಕ್ಕೂ ಅಲ್ಲ
ಅಸಲಿಗೆ ದ್ವೈತ ಅದ್ವೈತಗಳೇ
ಇಲ್ಲ, ಎಲ್ಲ ವಿದ್ವತ್ತಿನ ಕರಾಮತ್ತು
ಹೊಸತು ಹುಡುಕುವ ಪರಿ
ಪರಿಪರಿಯಾಗಿ

ಇನ್ನೊಂದೆಡೆ ಕಾಂಚಾಣದ
ಕುಣಿತ
ಸತ್ಯಕ್ಕೂ ಸ್ಥಳವಿಲ್ಲ
ಜ್ಞಾನಕ್ಕೂ ಬೆಲೆಯಿಲ್ಲ
ಸತ್ಯ ಜ್ಞಾನಗಳೆರಡು
ಕಾಂಚಾಣದ ಮಾರುಕಟ್ಟೆಯಲ್ಲಿ
ಇಡಲ್ಪಟ್ಟಿವೆ ಗಿರವಿಗೆ

ಅಲ್ಲೊಂದು ಸೌಂದರ್ಯ ರಾಶಿ
ನೈಜತೆಯೋ, ಕೃತಕತೆಯೋ,
ಅರಿಯದಂತಿರೆ ಅಲಂಕಾರ
ನಟನೆಯೇ ನಿಜವೆಂಬ
ಭ್ರಮೆಯ ಬದುಕು

ಮತ್ತಲ್ಲಿ ಮಠಗಳು ಆಶ್ರಮಗಳು
ಸಭ್ಯಸ್ಥರ ಕೂಟ
ಖಾವಿಬಟ್ಟೆಗಳ ಮೇಲಾಟ

ವಿದ್ಯೆ ಬುದ್ಧಿಗಳ ಆಗರ
ಸಹನೆ ಸಂಯಮಗಳ ಸಾಗರ
ಆದರೂ ಖಾವಿ ಬಟ್ಟೆಯಲ್ಲೂ ಕಾಮಿ
ಅಲ್ಲಿಯೂ ಅಂಟಿದ ರಕ್ತದ ಕಲೆ
ಅನ್ಯಾಯ ಅನಾಚಾರ ವ್ಯಭಿಚಾರಗಳ ಬಲೆ

ಮತ್ತೊಂದು ಕಾಲ ಕಾಯುತ್ತಿದೆ
ವಿಧ್ವಂಸಕರೆ ವಿಧ್ವಾಂಸರಾಗುವರು
ಜಾರೆಯೆಂದರೆ ಗರತಿ
ಸನ್ಯಾಸಿಯೆಂದರೆ ಸಂಸಾರಿ
ಚಾಂಡಾಲನೆ ಗುರುವಾಗುವನು
ಅರ್ಥವಾಗದ
ಮತ್ತೆ ಅರ್ಥೈಸಲಾಗದ
ಆದರೂ ಜಾಣ ಕುರುಡು ನಾಟಕಗಳು
ಎಂಥೆಂಥದೋ ವಿಪರ್ಯಾಸಗಳು


Tagged:

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...