ವಿಪರ್ಯಾಸಗಳು

ಅಲ್ಲಿ ವಿದ್ವತ್ತಿನದೇ ಮೇಲುಗೈ
ದ್ವೈತಕ್ಕೂ ಅಲ್ಲ, ಅದ್ವೈತಕ್ಕೂ ಅಲ್ಲ
ಅಸಲಿಗೆ ದ್ವೈತ ಅದ್ವೈತಗಳೇ
ಇಲ್ಲ, ಎಲ್ಲ ವಿದ್ವತ್ತಿನ ಕರಾಮತ್ತು
ಹೊಸತು ಹುಡುಕುವ ಪರಿ
ಪರಿಪರಿಯಾಗಿ

ಇನ್ನೊಂದೆಡೆ ಕಾಂಚಾಣದ
ಕುಣಿತ
ಸತ್ಯಕ್ಕೂ ಸ್ಥಳವಿಲ್ಲ
ಜ್ಞಾನಕ್ಕೂ ಬೆಲೆಯಿಲ್ಲ
ಸತ್ಯ ಜ್ಞಾನಗಳೆರಡು
ಕಾಂಚಾಣದ ಮಾರುಕಟ್ಟೆಯಲ್ಲಿ
ಇಡಲ್ಪಟ್ಟಿವೆ ಗಿರವಿಗೆ

ಅಲ್ಲೊಂದು ಸೌಂದರ್ಯ ರಾಶಿ
ನೈಜತೆಯೋ, ಕೃತಕತೆಯೋ,
ಅರಿಯದಂತಿರೆ ಅಲಂಕಾರ
ನಟನೆಯೇ ನಿಜವೆಂಬ
ಭ್ರಮೆಯ ಬದುಕು

ಮತ್ತಲ್ಲಿ ಮಠಗಳು ಆಶ್ರಮಗಳು
ಸಭ್ಯಸ್ಥರ ಕೂಟ
ಖಾವಿಬಟ್ಟೆಗಳ ಮೇಲಾಟ

ವಿದ್ಯೆ ಬುದ್ಧಿಗಳ ಆಗರ
ಸಹನೆ ಸಂಯಮಗಳ ಸಾಗರ
ಆದರೂ ಖಾವಿ ಬಟ್ಟೆಯಲ್ಲೂ ಕಾಮಿ
ಅಲ್ಲಿಯೂ ಅಂಟಿದ ರಕ್ತದ ಕಲೆ
ಅನ್ಯಾಯ ಅನಾಚಾರ ವ್ಯಭಿಚಾರಗಳ ಬಲೆ

ಮತ್ತೊಂದು ಕಾಲ ಕಾಯುತ್ತಿದೆ
ವಿಧ್ವಂಸಕರೆ ವಿಧ್ವಾಂಸರಾಗುವರು
ಜಾರೆಯೆಂದರೆ ಗರತಿ
ಸನ್ಯಾಸಿಯೆಂದರೆ ಸಂಸಾರಿ
ಚಾಂಡಾಲನೆ ಗುರುವಾಗುವನು
ಅರ್ಥವಾಗದ
ಮತ್ತೆ ಅರ್ಥೈಸಲಾಗದ
ಆದರೂ ಜಾಣ ಕುರುಡು ನಾಟಕಗಳು
ಎಂಥೆಂಥದೋ ವಿಪರ್ಯಾಸಗಳು


Previous post ನಾ…. ಬರುತ್ತೇನೆ ಕೇಳು!
Next post ಕವಿಯ ಹುಚ್ಚು ಮನಸ್ಸು

ಸಣ್ಣ ಕತೆ

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

cheap jordans|wholesale air max|wholesale jordans|wholesale jewelry|wholesale jerseys