Home / ಕವನ / ಕವಿತೆ / ಬಸಿಯಿಂದ ಕುಡಿಯುವದು

ಬಸಿಯಿಂದ ಕುಡಿಯುವದು

ನನಗೆಂದೂ ಅದೃಷ್ಟ ಒಲಿದಿಲ್ಲ
ಈಗಲೂ ಸಹ ನಾನದನ್ನು ಪಡೆಯಬಯಸಿಲ್ಲ
ನಿಜವಾಗಿ ಅದರಿಂದ ನನಗೇನೂ ಆಗಬೇಕಿಲ್ಲ
ಯಾಕೆನ್ನಿ ನಾನೀಗ ಸುಖಿಯಾಗಿಯೇ ಇದ್ದೇನಲ್ಲ !

ಸಾಗುತಿರುವ ನನ್ನೀ ಪಯಣದ ದಾರಿಯಲಿ
ಬಿತ್ತಿದ್ದಕ್ಕಿಂತ ಹೆಚ್ಚಿನದನ್ನೇ ಬೆಳೆದಿದ್ದೇನೆ.
ನಾ ಬಸಿಯಿಂದಲೇ ಕುಡಿಯುತಿರುವೆ,
ಯಾಕೆನ್ನಿ,ನನ್ನ ಕಪ್ಪು ತುಂಬಿ ತುಳುಕಿದೆ !

ನಾನೇನು ಮಹಾ ಸಿರಿವಂತನೇನಲ್ಲ;
ಅಗೊಮ್ಮೆ ಈಗೊಮ್ಮೆ ದುರ್ಭರ ಎನಿಸಿದೆ
ಆದರೂ,ಸಂಬಂಧಿಕರ,ಸ್ನೇಹಿತರ ಒಲವಿನಿಂದಾಗಿ,
ನಾನೂ, ಸಾಕಷ್ಟು ಸಿರಿವಂತ ಎಂದೆನಿಸುತಿದೆ !

ಆ ದೇವನ ಆಶೀರ್ವಾದಕೆ ಧನ್ಯವಾದಗಳು
ಅವನ ಕೃಪೆ ಎನ್ನ ಮೇಲೆ ಪೂರ್ಣ ಇದೆ
ನಾ ಬಸಿಯಿಂದಲೇ ಕುಡಿಯುತಿರುವೆ
ಯಾಕೆನ್ನಿ ನನ್ನ ಕಪ್ಪು ತುಂಬಿ ತುಳುಕಿದೆ !

ಧೈರ್ಯ, ಸಾಮರ್ಥ್ಯ ಗಳು ಅವನವೇ ಬಳುವಳಿ
ಸಾಗುವ ದಾರಿ,ಏರು ದುರ್ಗಮ ಎನಿಸಿದಾಗೆಲ್ಲ,
ಮತ್ತೊಮ್ಮೆ,ಹಾರೈಸು ಎಂದು ನಾ ಬೇಡುವುದೇ ಇಲ್ಲ
ಈಗಾಗಲೇ ಸಾಕಷ್ಟು ಹರಸಿರುವ ಅವನು !

ನಾವು ಎಂದೂ ನಿರತರಾಗದೇ ಇರೋಣ
ಮತ್ತೊಂದು ಸಹಾಯಕ ಭಾರ ಭರಿಸೋಣ
ಆಗ ನಾವೆಲ್ಲರೂ ಬಸಿಯಿಂದಲೇ ಕುಡಿಯೋಣ
ನಮ್ಮೆಲ್ಲರ ಕಪ್ಪುಗಳು ತುಂಬಿ ತುಳುಕಿದಾಗ !

ನಿಮ್ಮೆಲ್ಲರ ಕಪ್ಪುಗಳು ತುಂಬಿ ತುಳುಕುವಂತಾಗಲಿ

ಮೂಲ: ಜಾನ್ ಪಾಲ್ ಮೂರ್
Drinking From The Saucer by John Paul Moore


Tagged:

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...