Home / ಕವನ / ಕವಿತೆ / ಬಸಿಯಿಂದ ಕುಡಿಯುವದು

ಬಸಿಯಿಂದ ಕುಡಿಯುವದು

ನನಗೆಂದೂ ಅದೃಷ್ಟ ಒಲಿದಿಲ್ಲ
ಈಗಲೂ ಸಹ ನಾನದನ್ನು ಪಡೆಯಬಯಸಿಲ್ಲ
ನಿಜವಾಗಿ ಅದರಿಂದ ನನಗೇನೂ ಆಗಬೇಕಿಲ್ಲ
ಯಾಕೆನ್ನಿ ನಾನೀಗ ಸುಖಿಯಾಗಿಯೇ ಇದ್ದೇನಲ್ಲ !

ಸಾಗುತಿರುವ ನನ್ನೀ ಪಯಣದ ದಾರಿಯಲಿ
ಬಿತ್ತಿದ್ದಕ್ಕಿಂತ ಹೆಚ್ಚಿನದನ್ನೇ ಬೆಳೆದಿದ್ದೇನೆ.
ನಾ ಬಸಿಯಿಂದಲೇ ಕುಡಿಯುತಿರುವೆ,
ಯಾಕೆನ್ನಿ,ನನ್ನ ಕಪ್ಪು ತುಂಬಿ ತುಳುಕಿದೆ !

ನಾನೇನು ಮಹಾ ಸಿರಿವಂತನೇನಲ್ಲ;
ಅಗೊಮ್ಮೆ ಈಗೊಮ್ಮೆ ದುರ್ಭರ ಎನಿಸಿದೆ
ಆದರೂ,ಸಂಬಂಧಿಕರ,ಸ್ನೇಹಿತರ ಒಲವಿನಿಂದಾಗಿ,
ನಾನೂ, ಸಾಕಷ್ಟು ಸಿರಿವಂತ ಎಂದೆನಿಸುತಿದೆ !

ಆ ದೇವನ ಆಶೀರ್ವಾದಕೆ ಧನ್ಯವಾದಗಳು
ಅವನ ಕೃಪೆ ಎನ್ನ ಮೇಲೆ ಪೂರ್ಣ ಇದೆ
ನಾ ಬಸಿಯಿಂದಲೇ ಕುಡಿಯುತಿರುವೆ
ಯಾಕೆನ್ನಿ ನನ್ನ ಕಪ್ಪು ತುಂಬಿ ತುಳುಕಿದೆ !

ಧೈರ್ಯ, ಸಾಮರ್ಥ್ಯ ಗಳು ಅವನವೇ ಬಳುವಳಿ
ಸಾಗುವ ದಾರಿ,ಏರು ದುರ್ಗಮ ಎನಿಸಿದಾಗೆಲ್ಲ,
ಮತ್ತೊಮ್ಮೆ,ಹಾರೈಸು ಎಂದು ನಾ ಬೇಡುವುದೇ ಇಲ್ಲ
ಈಗಾಗಲೇ ಸಾಕಷ್ಟು ಹರಸಿರುವ ಅವನು !

ನಾವು ಎಂದೂ ನಿರತರಾಗದೇ ಇರೋಣ
ಮತ್ತೊಂದು ಸಹಾಯಕ ಭಾರ ಭರಿಸೋಣ
ಆಗ ನಾವೆಲ್ಲರೂ ಬಸಿಯಿಂದಲೇ ಕುಡಿಯೋಣ
ನಮ್ಮೆಲ್ಲರ ಕಪ್ಪುಗಳು ತುಂಬಿ ತುಳುಕಿದಾಗ !

ನಿಮ್ಮೆಲ್ಲರ ಕಪ್ಪುಗಳು ತುಂಬಿ ತುಳುಕುವಂತಾಗಲಿ

ಮೂಲ: ಜಾನ್ ಪಾಲ್ ಮೂರ್
Drinking From The Saucer by John Paul Moore


Tagged:

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...