Home / ಕವನ / ಹನಿಗವನ / ಹನಿಗಳು

ಹನಿಗಳು

ಇಲ್ಲಿ
ಸಣ್ಣಗೆ ಮಳೆ
ನಿನ್ನೆದುರು
ಕುಳಿತು
ಧ್ಯಾನಿಸಿದಂತೆ


ಮಗು
ಆಕೆಯ ತೊಡೆಯ
ಮೇಲೆ
ಹರಿದಾಡಿತು
ನದಿ
ನಡೆದು
ಹಾಡಿದಂತೆ


ನಿನ್ನೆದುರೇ
ರಮ್ಯತೆ
ಹುಟ್ಟುವುದಾದರೆ
ನಾನು
ಮರವಾಗುವೆ
ನೀ ಅಲ್ಲಿ
ಹೂವಾಗು


ಕಡಲು ಅಬ್ಬರಿಸುತ್ತಿದೆ
ಮೋಡ ಧ್ಯಾನಿಸುತ್ತಿದೆ
ಆಕಾಶದ ಬಯಲಲ್ಲಿ
ಆಕೆ
ಬರುವ ಸುಳಿವು ಸಿಕ್ಕಿದೆ
ಮುಂಗಾರಿನ ಹಂಗಾಮಿನಲ್ಲಿ


ಬಿಸಿಲ ಬಯಲ ಕಡಲ ಮೇಲೆ
ಸುಳಿದು ಬೀಸುವ ಗಾಳಿ
ಆಕೆಯ ನೆನಪಗಂಧವ ತರಲು
ದಂಡೆಯಲ್ಲಿನ ಹಕ್ಕಿ ನಾಚಿತು


ದಂಡೆಯಲ್ಲಿ ಅವರು
ನಡೆದು ಹೋದರು
ಜೋಡಿ ಹೆಜ್ಜೆಗೆ ನೆರಳು ಸಾಕ್ಷಿ
ಹೆಜ್ಜೆಗಳಲ್ಲಿ ಒಲವು ನಗುತ್ತಿತ್ತು
ಅವರ
ಪಾದಗಳಿಗೆ
ಮುತ್ತಿಕ್ಕಿದ್ದ ಅಲೆ
ಪ್ರೇಮ ಪಲ್ಲವಿ ಬರೆಯುತ್ತಿತ್ತು.


ಬಟಾ ಬಯಲು
ವಿಶಾಲ ಕಡಲ ಬಾಗಿಲೊಳಗೆ
ನುಸುಳಿದೆ ಬೆಳಗು
ಅದು ಬೇರೇನು ಅಲ್ಲ ;
ನಿನ್ನದೇ ಉಸಿರು


ಉರಿ ಉರಿ ಬಿಸಿಲು
ಬರ ಬರನೆ ಬೀಸುವ ಗಾಳಿ
ಗಾಳಿಗೆ ಮೈ ಮುರಿದೇಳುವ ಕಡಲು
ಮುಗಿಲಿಗೆ ದಿಗಿಲು ಬಡಿದಂತೆ
ನೋಡುವ ಅವಳು


ಸಾಕು ಸಾಕಾಗಿದೆ ಈ ಬಿಸಿಲು
ಎಷ್ಟು ಋತುಗಳ ಕಳೆದೆನೋ ಹೀಗೆ
ಒಂಟಿಯಾಗಿ ಒಬ್ಬಂಟಿಯಾಗಿ
ಏಕಾಂಗಿಯಾಗಿ
ಜೊತೆಗೆ ಬುದ್ಧನೂ ನಿಲ್ಲಲಿಲ್ಲ
ರೂಮಿಯೂ ನಿಲ್ಲಲಿಲ್ಲ
ಎಲ್ಲರೂ ಬೆಳಕ ಬೆನ್ನ ಹತ್ತಿದವರೇ
ನಾನು ಕಾದಿದ್ದೇನೆ
ನಿನಗಾಗಿ ; ನಿನ್ನ ಕಿರುನಗೆಗಾಗಿ


ಇರುಳು ಹಗಲು ನದಿ ಕಡಲು
ಬೆಡಗು ಬಯಲು ಹಕ್ಕಿ ಚುಕ್ಕಿ
ಇಳೆ ಮಳೆ ಆಕಾಶ ಚಂದಿರ
ಒಂದಾದವು
ಒಂದಾದ ಮೇಲೊಂದರಂತೆ
ದಶಕಗಳು ಕಳೆದವು
ನಾವು ಇಲ್ಲೇ ಇದ್ದೇವೆ
ಚಲನೆಯೊಳಗೂ ಚಲನೆ ಮರೆತು
ಮೌನದೊಳಗು ಮಾತು ಮೊರೆತು


ಬಯಲ ಬೆಳಕು ಕೂಡಿತು
ಕ್ಷಿತಿಜ ಭೂ ಆಕಾಶ ಬೆಸೆಯಿತು
ಅದರಾಚೆಯ ಹುಡುಕಾಟ
ನನಗೂ ನಿನಗೂ


Tagged:

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...