Home / ಕವನ / ಹನಿಗವನ / ಹನಿಗಳು

ಹನಿಗಳು

ಇಲ್ಲಿ
ಸಣ್ಣಗೆ ಮಳೆ
ನಿನ್ನೆದುರು
ಕುಳಿತು
ಧ್ಯಾನಿಸಿದಂತೆ


ಮಗು
ಆಕೆಯ ತೊಡೆಯ
ಮೇಲೆ
ಹರಿದಾಡಿತು
ನದಿ
ನಡೆದು
ಹಾಡಿದಂತೆ


ನಿನ್ನೆದುರೇ
ರಮ್ಯತೆ
ಹುಟ್ಟುವುದಾದರೆ
ನಾನು
ಮರವಾಗುವೆ
ನೀ ಅಲ್ಲಿ
ಹೂವಾಗು


ಕಡಲು ಅಬ್ಬರಿಸುತ್ತಿದೆ
ಮೋಡ ಧ್ಯಾನಿಸುತ್ತಿದೆ
ಆಕಾಶದ ಬಯಲಲ್ಲಿ
ಆಕೆ
ಬರುವ ಸುಳಿವು ಸಿಕ್ಕಿದೆ
ಮುಂಗಾರಿನ ಹಂಗಾಮಿನಲ್ಲಿ


ಬಿಸಿಲ ಬಯಲ ಕಡಲ ಮೇಲೆ
ಸುಳಿದು ಬೀಸುವ ಗಾಳಿ
ಆಕೆಯ ನೆನಪಗಂಧವ ತರಲು
ದಂಡೆಯಲ್ಲಿನ ಹಕ್ಕಿ ನಾಚಿತು


ದಂಡೆಯಲ್ಲಿ ಅವರು
ನಡೆದು ಹೋದರು
ಜೋಡಿ ಹೆಜ್ಜೆಗೆ ನೆರಳು ಸಾಕ್ಷಿ
ಹೆಜ್ಜೆಗಳಲ್ಲಿ ಒಲವು ನಗುತ್ತಿತ್ತು
ಅವರ
ಪಾದಗಳಿಗೆ
ಮುತ್ತಿಕ್ಕಿದ್ದ ಅಲೆ
ಪ್ರೇಮ ಪಲ್ಲವಿ ಬರೆಯುತ್ತಿತ್ತು.


ಬಟಾ ಬಯಲು
ವಿಶಾಲ ಕಡಲ ಬಾಗಿಲೊಳಗೆ
ನುಸುಳಿದೆ ಬೆಳಗು
ಅದು ಬೇರೇನು ಅಲ್ಲ ;
ನಿನ್ನದೇ ಉಸಿರು


ಉರಿ ಉರಿ ಬಿಸಿಲು
ಬರ ಬರನೆ ಬೀಸುವ ಗಾಳಿ
ಗಾಳಿಗೆ ಮೈ ಮುರಿದೇಳುವ ಕಡಲು
ಮುಗಿಲಿಗೆ ದಿಗಿಲು ಬಡಿದಂತೆ
ನೋಡುವ ಅವಳು


ಸಾಕು ಸಾಕಾಗಿದೆ ಈ ಬಿಸಿಲು
ಎಷ್ಟು ಋತುಗಳ ಕಳೆದೆನೋ ಹೀಗೆ
ಒಂಟಿಯಾಗಿ ಒಬ್ಬಂಟಿಯಾಗಿ
ಏಕಾಂಗಿಯಾಗಿ
ಜೊತೆಗೆ ಬುದ್ಧನೂ ನಿಲ್ಲಲಿಲ್ಲ
ರೂಮಿಯೂ ನಿಲ್ಲಲಿಲ್ಲ
ಎಲ್ಲರೂ ಬೆಳಕ ಬೆನ್ನ ಹತ್ತಿದವರೇ
ನಾನು ಕಾದಿದ್ದೇನೆ
ನಿನಗಾಗಿ ; ನಿನ್ನ ಕಿರುನಗೆಗಾಗಿ


ಇರುಳು ಹಗಲು ನದಿ ಕಡಲು
ಬೆಡಗು ಬಯಲು ಹಕ್ಕಿ ಚುಕ್ಕಿ
ಇಳೆ ಮಳೆ ಆಕಾಶ ಚಂದಿರ
ಒಂದಾದವು
ಒಂದಾದ ಮೇಲೊಂದರಂತೆ
ದಶಕಗಳು ಕಳೆದವು
ನಾವು ಇಲ್ಲೇ ಇದ್ದೇವೆ
ಚಲನೆಯೊಳಗೂ ಚಲನೆ ಮರೆತು
ಮೌನದೊಳಗು ಮಾತು ಮೊರೆತು


ಬಯಲ ಬೆಳಕು ಕೂಡಿತು
ಕ್ಷಿತಿಜ ಭೂ ಆಕಾಶ ಬೆಸೆಯಿತು
ಅದರಾಚೆಯ ಹುಡುಕಾಟ
ನನಗೂ ನಿನಗೂ


Tagged:

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...