Home / ಕವನ / ಕವಿತೆ / ಮಂಗಲಂ ಜಯ ಜಯತು ಜಗನ್ಮಾತೆ

ಮಂಗಲಂ ಜಯ ಜಯತು ಜಗನ್ಮಾತೆ

ಮಂಗಲಂ ಜಯ ಜಯತು ಜಗನ್ಮಾತೆ
ಅಂಗಜಹರರೂಪ ಮಂಗಲಾಂಗಿಗೆ
ಸಂಗವಿದೂರ ದುಷ್ಕೃತಿ ಭಂಗತುಂಗ ವಿಕ್ರಮಗೆ || ಪ ||

ಹರಿ ಹರ ಬ್ರಹ್ಮರನು ತಾಯಾಗಿ ರಕ್ಷಿಪಳು
ಸರಿಗಾಣದಿರುವಂಥ ಹರಮೂರ್ತಿಗೆ
ಪರಿಪರಿಯ ವರ್ಣದಲಿ ಹೊಳೆಯುತಲಿ
ಪರಿಪೂರ್ಣ ಸುರಜಾಲಮಯಳಾದ ಸ್ಥಿರಕೀರ್ತಿಗೆ || ೧ ||

ಕೊಬ್ಬಿದಾ ಮಧುಕೈಟಭಾಸುರರ ಸಂಹರಿಸಿ
ಕೊಬ್ಬಿರಿದು ಉಬ್ಬಿದಾ ಮಹಾಕಾಳಿಗೆ
ಅಬ್ಬರಿಸಿ ಬರುವಂಥಾ ದುಷ್ಟದೈತ್ಯರನೆಲ್ಲ
ಇಬ್ಭಾಗ ಸೀಳಿ ಶಾಶ್ವಿತಳಾದ ರಣಕೇಳಿಗೆ || ೨ ||

ಸಿಟ್ಟಿಲೆ ಮಹಿಷನನು ಶಿರಮೆಟ್ಟಿ ಸಂಹರಿಸಿ
ಕಷ್ಟವನು ಕಳಿದಂಥ ಮಹಾಲಕ್ಷ್ಮಿಗೆ ವಟ್ಟರಸಿ ಬರುವಂಥ
ಕೆಟ್ಟ ದೈತ್ಯರನೆಲ್ಲ ಕುಟ್ಟಿ ಸವರಿದ ವೀರ ಜಯಲಕ್ಷ್ಮಿಗೆ || ೩ ||

ಚಂಡಮುಂಡರದೋದ೯ಂಡ ದ್ಯೆತ್ಯರ ಶಿರವ
ಚಂಡಾಡಿ ಮೆರದಂಥ ಚಾಮುಂಡಿಗೆ
ಅಂಡಲೆದು ಒದರುತಲೆ ಬರುವಂಥ ಬಂಡರನು
ತುಂಡಾಗಿ ಖಂಡಿಸಿದ ಪ್ರಚಂಡಿಗೆ || ೪ ||

ಉದ್ಧಟರು ಶುಂಭ-ನಿಶುಂಭರೆಂಬುವರನ್ನು
ಯುದ್ಧದಲ್ಲಿ ಕೊಂದಂಥ ಬ್ರಹ್ಮಾಣಿಗೆ
ಸಿದ್ದ ಶಾಶ್ವಿತನಾದ ಗುಡಿಪುರದ ಕಲ್ಮಾನ
ಪೊದ್ದು ಪೊರೆದಿಹ ಗುರು ಕಲ್ಯಾಣಿಗೆ || ೫ ||
*****

 

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...