Home / ಲೇಖನ / ಇತರೆ / ಪುಸ್ತಕ ಪ್ರೀತಿ

ಪುಸ್ತಕ ಪ್ರೀತಿ

ಚಿತ್ರ: ಅಲೆಕ್ಸಾಂಡರ್‍ ಸ್ಟಾಕ್ಮಾರ್‍

ಪ್ರಿಯ ಸಖಿ,

ಪುಸ್ತಕದಿ ದೊರೆತರಿವು ಮಸ್ತಕದಿ ತಳೆದಮಣಿ. ಚಿತ್ತದೊಳು ಬೆಳೆದರಿವು ತರು ತಳೆದ ಪುಷ್ಪ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ಪುಸ್ತಕ ಜ್ಞಾನವು ಬಹಿರಂಗ ವ್ಯಾಪ್ತಿಯಲ್ಲಿ ಬರುವುದು. ಚಿಂತನೆ ಜನ್ಯವಾದ ಜ್ಞಾನವು ಅಂತರಂಗ ವ್ಯಾಪ್ತಿಯಾದುದು. ನಿಜವೇ ಆದರೆ ಚಿಂತನಶೀಲತೆ ಬೆಳೆಯುವುದು ಪುಸ್ತಕಗಳ ಸಂಪರ್ಕದಿಂದ. ಆದ್ದರಿಂದ ಪುಸ್ತಕಗಳ ಪ್ರಯೋಜನವು ಅಂತರಂಗ ಚೈತನ್ಯದ ಸಾಧನೆಗೆ ಮೊದಲ ಮೆಟ್ಟಿಲು ಎನ್ನಬಹುದು.

ಪುಸ್ತಕಗಳು ಹಲವಾರು ಮಹಾತ್ಮರ ಜೀವನವನ್ನು ರೂಪಿಸಿವೆ. ಹಲವರ ಬದುಕಿನಲ್ಲಿ ಪ್ರಭಾವ ಬೀರಿವೆ. ಕ್ರಾಂತಿಯುಂಟು ಮಾಡಿವೆ. ಬದಲಾವಣೆ ತಂದಿವೆ. ಹೊಸ ವಿಚಾರಗಳನ್ನು ಮೊಳೆಸಿವೆ, ಬೆಳೆಸಿವೆ. ಉತ್ತಮ ಪುಸ್ತಕವನ್ನು ಓದುವವರು ಇರುವವರೆಗೂ
ಈ ಪ್ರಕ್ರಿಯೆಗಳು ಸಾಗುತ್ತಿರುತ್ತವೆ. ಆದರೆ ಇತ್ತೀಚಿನ ದಿನಗಳಲ್ಲಿ ಪುಸ್ತಕಗಳನ್ನು ಓದುತ್ತಿರುವವರು ಕಡಿಮೆಯಾಗುತ್ತಿದ್ದಾರೆ ಎಂಬ ದೂರು ಎಲ್ಲೆಡೆಯಿಂದ ಕೇಳಿ ಬರುತ್ತಿದೆ. ಇದಕ್ಕೆ ಹಲವಾರು ಕಾರಣಗಳೂ ಇವೆ.

ಬದಲಾದ ನಮ್ಮ ಜೀವನ ಶೈಲಿಯಿಂದ ಅವಸರದ ಈ ಯುಗದಲ್ಲಿ ಓದುವ ಹವ್ಯಾಸ ಕಡಿಮೆಯಾಗುತ್ತಿದೆ. ಹಾಗೇ ದೃಶ್ಯ ಮಾಧ್ಯಮಗಳ ಹಾವಳಿಯೂ ಈ ಹವ್ಯಾಸಕ್ಕೆ ನೇರ ಪೆಟ್ಟು ಕೊಟ್ಟಿದೆ. ಹಣವನ್ನು ಮಾಡುವುದೇ ಜೀವನದ ಪ್ರಮುಖ ಗುರಿಯೆಂಬ ಭೂತ ಮಿದುಳನ್ನು ಹೊಕ್ಕಂದಿನಿಂದ ಯಾವ ಹವ್ಯಾಸಗಳಿಗೂ ಈಗ ಜನರಿಗೆ ಬಿಡುವಿಲ್ಲ. ಫ್ಯಾಷನ್, ಐಷಾರಾಮದ ಬದುಕು, ಪಂಚತಾರಾ ಸಂಸ್ಕೃತಿಯೆಡೆಗೆ ಹೆಚ್ಚು ವಾಲುತ್ತಿರುವ ನಮಗೆ ಓದುವುದು, ಗಂಭೀರವಾಗಿ ಯೋಚಿಸುವುದು, ಚಿಂತಿಸುವುದು, ಓದಿದ್ದನ್ನು ಮನನ ಮಾಡುವುದು ಎಲ್ಲವೂ ಬೋರ್ ಎನ್ನಿಸುತ್ತದೆ.

ಪ್ರಿಯ ಸಖಿ, ಆದರೆ ಬೇರೆ ಯಾವ ಮಾಧ್ಯಮವೂ ನೀಡಲಾಗದಂತಹ ಸಂತೋಷವನ್ನು, ಆತ್ಮ ತೃಪ್ತಿಯನ್ನು ಪುಸ್ತಕದ ಓದು ನೀಡುತ್ತದೆ. ಉತ್ತಮ ಪುಸ್ತಕದ ಓದಿನಿಂದ ಮನಸ್ಸು ಅರಳುತ್ತದೆ. ಇದೇ ಓದಿನಿಂದ ನಮಗೆ ದೊರೆಯುವ ಪ್ರತಿಫಲ. ಹಾಗೇ ಎಲ್ಲ ಮಾಧ್ಯಮಗಳಿಗೂ ಮೂಲ ಪುಸ್ತಕಗಳೇ ಎನ್ನುವುದನ್ನು ನಾವು ಮರೆಯುವಂತಿಲ್ಲ. ಅಧ್ಯಾತ್ಮ, ಧಾರ್ಮಿಕ, ತಾತ್ವಿಕ, ಸಾಮಾಜಿಕ, ನೈತಿಕ, ಕೌಟುಂಬಿಕ,
ರಾಜಕೀಯ ಹೀಗೆ ಯಾವುದೇ ವಿಭಾಗದ ಪುಸ್ತಕವಿರಲಿ ಆ ಅಭಿರುಚಿಯಿರುವ ಓದುಗನಿಗೆ ನೆಮ್ಮದಿಯನ್ನು ನೀಡುತ್ತದೆ. ಹೊಸ ಬೆಳಕನ್ನು ಮೂಡಿಸುತ್ತದೆ.

ಸಖಿ, ಪುಸ್ತಕಕ್ಕೆ ಒಂದು ಜನಾಂಗದ ಕಣ್ಣು ತೆರೆಸುವ ಶಕ್ತಿಯಿದೆ. ಆದ್ದರಿಂದಲೇ ನಮ್ಮಲ್ಲಿ ಪುಸ್ತಕ ಪ್ರೀತಿ ಎಷ್ಟು ಬೇಗ ಮೊಳೆಯುತ್ತದೋ ಅಷ್ಟೂ ಒಳ್ಳೆಯದು. ಆ ಪ್ರೀತಿಯಿಂದ ನಾವು ಹೆಚ್ಚು ಹೆಚ್ಚು ಓದುವಂತಾಗಲಿ, ತಿಳಿಯುವಂತಾಗಲಿ, ಆರಳುವಂತಾಗಲಿ, ನೆಮ್ಮದಿ ಕಾಣುವಂತಾಗಲಿ.


Tagged:

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...