Home / ಲೇಖನ / ಇತರೆ / ಪುಸ್ತಕ ಪ್ರೀತಿ

ಪುಸ್ತಕ ಪ್ರೀತಿ

ಚಿತ್ರ: ಅಲೆಕ್ಸಾಂಡರ್‍ ಸ್ಟಾಕ್ಮಾರ್‍

ಪ್ರಿಯ ಸಖಿ,

ಪುಸ್ತಕದಿ ದೊರೆತರಿವು ಮಸ್ತಕದಿ ತಳೆದಮಣಿ. ಚಿತ್ತದೊಳು ಬೆಳೆದರಿವು ತರು ತಳೆದ ಪುಷ್ಪ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ಪುಸ್ತಕ ಜ್ಞಾನವು ಬಹಿರಂಗ ವ್ಯಾಪ್ತಿಯಲ್ಲಿ ಬರುವುದು. ಚಿಂತನೆ ಜನ್ಯವಾದ ಜ್ಞಾನವು ಅಂತರಂಗ ವ್ಯಾಪ್ತಿಯಾದುದು. ನಿಜವೇ ಆದರೆ ಚಿಂತನಶೀಲತೆ ಬೆಳೆಯುವುದು ಪುಸ್ತಕಗಳ ಸಂಪರ್ಕದಿಂದ. ಆದ್ದರಿಂದ ಪುಸ್ತಕಗಳ ಪ್ರಯೋಜನವು ಅಂತರಂಗ ಚೈತನ್ಯದ ಸಾಧನೆಗೆ ಮೊದಲ ಮೆಟ್ಟಿಲು ಎನ್ನಬಹುದು.

ಪುಸ್ತಕಗಳು ಹಲವಾರು ಮಹಾತ್ಮರ ಜೀವನವನ್ನು ರೂಪಿಸಿವೆ. ಹಲವರ ಬದುಕಿನಲ್ಲಿ ಪ್ರಭಾವ ಬೀರಿವೆ. ಕ್ರಾಂತಿಯುಂಟು ಮಾಡಿವೆ. ಬದಲಾವಣೆ ತಂದಿವೆ. ಹೊಸ ವಿಚಾರಗಳನ್ನು ಮೊಳೆಸಿವೆ, ಬೆಳೆಸಿವೆ. ಉತ್ತಮ ಪುಸ್ತಕವನ್ನು ಓದುವವರು ಇರುವವರೆಗೂ
ಈ ಪ್ರಕ್ರಿಯೆಗಳು ಸಾಗುತ್ತಿರುತ್ತವೆ. ಆದರೆ ಇತ್ತೀಚಿನ ದಿನಗಳಲ್ಲಿ ಪುಸ್ತಕಗಳನ್ನು ಓದುತ್ತಿರುವವರು ಕಡಿಮೆಯಾಗುತ್ತಿದ್ದಾರೆ ಎಂಬ ದೂರು ಎಲ್ಲೆಡೆಯಿಂದ ಕೇಳಿ ಬರುತ್ತಿದೆ. ಇದಕ್ಕೆ ಹಲವಾರು ಕಾರಣಗಳೂ ಇವೆ.

ಬದಲಾದ ನಮ್ಮ ಜೀವನ ಶೈಲಿಯಿಂದ ಅವಸರದ ಈ ಯುಗದಲ್ಲಿ ಓದುವ ಹವ್ಯಾಸ ಕಡಿಮೆಯಾಗುತ್ತಿದೆ. ಹಾಗೇ ದೃಶ್ಯ ಮಾಧ್ಯಮಗಳ ಹಾವಳಿಯೂ ಈ ಹವ್ಯಾಸಕ್ಕೆ ನೇರ ಪೆಟ್ಟು ಕೊಟ್ಟಿದೆ. ಹಣವನ್ನು ಮಾಡುವುದೇ ಜೀವನದ ಪ್ರಮುಖ ಗುರಿಯೆಂಬ ಭೂತ ಮಿದುಳನ್ನು ಹೊಕ್ಕಂದಿನಿಂದ ಯಾವ ಹವ್ಯಾಸಗಳಿಗೂ ಈಗ ಜನರಿಗೆ ಬಿಡುವಿಲ್ಲ. ಫ್ಯಾಷನ್, ಐಷಾರಾಮದ ಬದುಕು, ಪಂಚತಾರಾ ಸಂಸ್ಕೃತಿಯೆಡೆಗೆ ಹೆಚ್ಚು ವಾಲುತ್ತಿರುವ ನಮಗೆ ಓದುವುದು, ಗಂಭೀರವಾಗಿ ಯೋಚಿಸುವುದು, ಚಿಂತಿಸುವುದು, ಓದಿದ್ದನ್ನು ಮನನ ಮಾಡುವುದು ಎಲ್ಲವೂ ಬೋರ್ ಎನ್ನಿಸುತ್ತದೆ.

ಪ್ರಿಯ ಸಖಿ, ಆದರೆ ಬೇರೆ ಯಾವ ಮಾಧ್ಯಮವೂ ನೀಡಲಾಗದಂತಹ ಸಂತೋಷವನ್ನು, ಆತ್ಮ ತೃಪ್ತಿಯನ್ನು ಪುಸ್ತಕದ ಓದು ನೀಡುತ್ತದೆ. ಉತ್ತಮ ಪುಸ್ತಕದ ಓದಿನಿಂದ ಮನಸ್ಸು ಅರಳುತ್ತದೆ. ಇದೇ ಓದಿನಿಂದ ನಮಗೆ ದೊರೆಯುವ ಪ್ರತಿಫಲ. ಹಾಗೇ ಎಲ್ಲ ಮಾಧ್ಯಮಗಳಿಗೂ ಮೂಲ ಪುಸ್ತಕಗಳೇ ಎನ್ನುವುದನ್ನು ನಾವು ಮರೆಯುವಂತಿಲ್ಲ. ಅಧ್ಯಾತ್ಮ, ಧಾರ್ಮಿಕ, ತಾತ್ವಿಕ, ಸಾಮಾಜಿಕ, ನೈತಿಕ, ಕೌಟುಂಬಿಕ,
ರಾಜಕೀಯ ಹೀಗೆ ಯಾವುದೇ ವಿಭಾಗದ ಪುಸ್ತಕವಿರಲಿ ಆ ಅಭಿರುಚಿಯಿರುವ ಓದುಗನಿಗೆ ನೆಮ್ಮದಿಯನ್ನು ನೀಡುತ್ತದೆ. ಹೊಸ ಬೆಳಕನ್ನು ಮೂಡಿಸುತ್ತದೆ.

ಸಖಿ, ಪುಸ್ತಕಕ್ಕೆ ಒಂದು ಜನಾಂಗದ ಕಣ್ಣು ತೆರೆಸುವ ಶಕ್ತಿಯಿದೆ. ಆದ್ದರಿಂದಲೇ ನಮ್ಮಲ್ಲಿ ಪುಸ್ತಕ ಪ್ರೀತಿ ಎಷ್ಟು ಬೇಗ ಮೊಳೆಯುತ್ತದೋ ಅಷ್ಟೂ ಒಳ್ಳೆಯದು. ಆ ಪ್ರೀತಿಯಿಂದ ನಾವು ಹೆಚ್ಚು ಹೆಚ್ಚು ಓದುವಂತಾಗಲಿ, ತಿಳಿಯುವಂತಾಗಲಿ, ಆರಳುವಂತಾಗಲಿ, ನೆಮ್ಮದಿ ಕಾಣುವಂತಾಗಲಿ.


Tagged:

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...