Home / ಲೇಖನ / ಇತರೆ / ಪುಸ್ತಕ ಪ್ರೀತಿ

ಪುಸ್ತಕ ಪ್ರೀತಿ

ಚಿತ್ರ: ಅಲೆಕ್ಸಾಂಡರ್‍ ಸ್ಟಾಕ್ಮಾರ್‍

ಪ್ರಿಯ ಸಖಿ,

ಪುಸ್ತಕದಿ ದೊರೆತರಿವು ಮಸ್ತಕದಿ ತಳೆದಮಣಿ. ಚಿತ್ತದೊಳು ಬೆಳೆದರಿವು ತರು ತಳೆದ ಪುಷ್ಪ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ಪುಸ್ತಕ ಜ್ಞಾನವು ಬಹಿರಂಗ ವ್ಯಾಪ್ತಿಯಲ್ಲಿ ಬರುವುದು. ಚಿಂತನೆ ಜನ್ಯವಾದ ಜ್ಞಾನವು ಅಂತರಂಗ ವ್ಯಾಪ್ತಿಯಾದುದು. ನಿಜವೇ ಆದರೆ ಚಿಂತನಶೀಲತೆ ಬೆಳೆಯುವುದು ಪುಸ್ತಕಗಳ ಸಂಪರ್ಕದಿಂದ. ಆದ್ದರಿಂದ ಪುಸ್ತಕಗಳ ಪ್ರಯೋಜನವು ಅಂತರಂಗ ಚೈತನ್ಯದ ಸಾಧನೆಗೆ ಮೊದಲ ಮೆಟ್ಟಿಲು ಎನ್ನಬಹುದು.

ಪುಸ್ತಕಗಳು ಹಲವಾರು ಮಹಾತ್ಮರ ಜೀವನವನ್ನು ರೂಪಿಸಿವೆ. ಹಲವರ ಬದುಕಿನಲ್ಲಿ ಪ್ರಭಾವ ಬೀರಿವೆ. ಕ್ರಾಂತಿಯುಂಟು ಮಾಡಿವೆ. ಬದಲಾವಣೆ ತಂದಿವೆ. ಹೊಸ ವಿಚಾರಗಳನ್ನು ಮೊಳೆಸಿವೆ, ಬೆಳೆಸಿವೆ. ಉತ್ತಮ ಪುಸ್ತಕವನ್ನು ಓದುವವರು ಇರುವವರೆಗೂ
ಈ ಪ್ರಕ್ರಿಯೆಗಳು ಸಾಗುತ್ತಿರುತ್ತವೆ. ಆದರೆ ಇತ್ತೀಚಿನ ದಿನಗಳಲ್ಲಿ ಪುಸ್ತಕಗಳನ್ನು ಓದುತ್ತಿರುವವರು ಕಡಿಮೆಯಾಗುತ್ತಿದ್ದಾರೆ ಎಂಬ ದೂರು ಎಲ್ಲೆಡೆಯಿಂದ ಕೇಳಿ ಬರುತ್ತಿದೆ. ಇದಕ್ಕೆ ಹಲವಾರು ಕಾರಣಗಳೂ ಇವೆ.

ಬದಲಾದ ನಮ್ಮ ಜೀವನ ಶೈಲಿಯಿಂದ ಅವಸರದ ಈ ಯುಗದಲ್ಲಿ ಓದುವ ಹವ್ಯಾಸ ಕಡಿಮೆಯಾಗುತ್ತಿದೆ. ಹಾಗೇ ದೃಶ್ಯ ಮಾಧ್ಯಮಗಳ ಹಾವಳಿಯೂ ಈ ಹವ್ಯಾಸಕ್ಕೆ ನೇರ ಪೆಟ್ಟು ಕೊಟ್ಟಿದೆ. ಹಣವನ್ನು ಮಾಡುವುದೇ ಜೀವನದ ಪ್ರಮುಖ ಗುರಿಯೆಂಬ ಭೂತ ಮಿದುಳನ್ನು ಹೊಕ್ಕಂದಿನಿಂದ ಯಾವ ಹವ್ಯಾಸಗಳಿಗೂ ಈಗ ಜನರಿಗೆ ಬಿಡುವಿಲ್ಲ. ಫ್ಯಾಷನ್, ಐಷಾರಾಮದ ಬದುಕು, ಪಂಚತಾರಾ ಸಂಸ್ಕೃತಿಯೆಡೆಗೆ ಹೆಚ್ಚು ವಾಲುತ್ತಿರುವ ನಮಗೆ ಓದುವುದು, ಗಂಭೀರವಾಗಿ ಯೋಚಿಸುವುದು, ಚಿಂತಿಸುವುದು, ಓದಿದ್ದನ್ನು ಮನನ ಮಾಡುವುದು ಎಲ್ಲವೂ ಬೋರ್ ಎನ್ನಿಸುತ್ತದೆ.

ಪ್ರಿಯ ಸಖಿ, ಆದರೆ ಬೇರೆ ಯಾವ ಮಾಧ್ಯಮವೂ ನೀಡಲಾಗದಂತಹ ಸಂತೋಷವನ್ನು, ಆತ್ಮ ತೃಪ್ತಿಯನ್ನು ಪುಸ್ತಕದ ಓದು ನೀಡುತ್ತದೆ. ಉತ್ತಮ ಪುಸ್ತಕದ ಓದಿನಿಂದ ಮನಸ್ಸು ಅರಳುತ್ತದೆ. ಇದೇ ಓದಿನಿಂದ ನಮಗೆ ದೊರೆಯುವ ಪ್ರತಿಫಲ. ಹಾಗೇ ಎಲ್ಲ ಮಾಧ್ಯಮಗಳಿಗೂ ಮೂಲ ಪುಸ್ತಕಗಳೇ ಎನ್ನುವುದನ್ನು ನಾವು ಮರೆಯುವಂತಿಲ್ಲ. ಅಧ್ಯಾತ್ಮ, ಧಾರ್ಮಿಕ, ತಾತ್ವಿಕ, ಸಾಮಾಜಿಕ, ನೈತಿಕ, ಕೌಟುಂಬಿಕ,
ರಾಜಕೀಯ ಹೀಗೆ ಯಾವುದೇ ವಿಭಾಗದ ಪುಸ್ತಕವಿರಲಿ ಆ ಅಭಿರುಚಿಯಿರುವ ಓದುಗನಿಗೆ ನೆಮ್ಮದಿಯನ್ನು ನೀಡುತ್ತದೆ. ಹೊಸ ಬೆಳಕನ್ನು ಮೂಡಿಸುತ್ತದೆ.

ಸಖಿ, ಪುಸ್ತಕಕ್ಕೆ ಒಂದು ಜನಾಂಗದ ಕಣ್ಣು ತೆರೆಸುವ ಶಕ್ತಿಯಿದೆ. ಆದ್ದರಿಂದಲೇ ನಮ್ಮಲ್ಲಿ ಪುಸ್ತಕ ಪ್ರೀತಿ ಎಷ್ಟು ಬೇಗ ಮೊಳೆಯುತ್ತದೋ ಅಷ್ಟೂ ಒಳ್ಳೆಯದು. ಆ ಪ್ರೀತಿಯಿಂದ ನಾವು ಹೆಚ್ಚು ಹೆಚ್ಚು ಓದುವಂತಾಗಲಿ, ತಿಳಿಯುವಂತಾಗಲಿ, ಆರಳುವಂತಾಗಲಿ, ನೆಮ್ಮದಿ ಕಾಣುವಂತಾಗಲಿ.


Tagged:

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...