Home / ಲೇಖನ / ಇತರೆ / ಪುಸ್ತಕ ಪ್ರೀತಿ

ಪುಸ್ತಕ ಪ್ರೀತಿ

ಚಿತ್ರ: ಅಲೆಕ್ಸಾಂಡರ್‍ ಸ್ಟಾಕ್ಮಾರ್‍

ಪ್ರಿಯ ಸಖಿ,

ಪುಸ್ತಕದಿ ದೊರೆತರಿವು ಮಸ್ತಕದಿ ತಳೆದಮಣಿ. ಚಿತ್ತದೊಳು ಬೆಳೆದರಿವು ತರು ತಳೆದ ಪುಷ್ಪ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ಪುಸ್ತಕ ಜ್ಞಾನವು ಬಹಿರಂಗ ವ್ಯಾಪ್ತಿಯಲ್ಲಿ ಬರುವುದು. ಚಿಂತನೆ ಜನ್ಯವಾದ ಜ್ಞಾನವು ಅಂತರಂಗ ವ್ಯಾಪ್ತಿಯಾದುದು. ನಿಜವೇ ಆದರೆ ಚಿಂತನಶೀಲತೆ ಬೆಳೆಯುವುದು ಪುಸ್ತಕಗಳ ಸಂಪರ್ಕದಿಂದ. ಆದ್ದರಿಂದ ಪುಸ್ತಕಗಳ ಪ್ರಯೋಜನವು ಅಂತರಂಗ ಚೈತನ್ಯದ ಸಾಧನೆಗೆ ಮೊದಲ ಮೆಟ್ಟಿಲು ಎನ್ನಬಹುದು.

ಪುಸ್ತಕಗಳು ಹಲವಾರು ಮಹಾತ್ಮರ ಜೀವನವನ್ನು ರೂಪಿಸಿವೆ. ಹಲವರ ಬದುಕಿನಲ್ಲಿ ಪ್ರಭಾವ ಬೀರಿವೆ. ಕ್ರಾಂತಿಯುಂಟು ಮಾಡಿವೆ. ಬದಲಾವಣೆ ತಂದಿವೆ. ಹೊಸ ವಿಚಾರಗಳನ್ನು ಮೊಳೆಸಿವೆ, ಬೆಳೆಸಿವೆ. ಉತ್ತಮ ಪುಸ್ತಕವನ್ನು ಓದುವವರು ಇರುವವರೆಗೂ
ಈ ಪ್ರಕ್ರಿಯೆಗಳು ಸಾಗುತ್ತಿರುತ್ತವೆ. ಆದರೆ ಇತ್ತೀಚಿನ ದಿನಗಳಲ್ಲಿ ಪುಸ್ತಕಗಳನ್ನು ಓದುತ್ತಿರುವವರು ಕಡಿಮೆಯಾಗುತ್ತಿದ್ದಾರೆ ಎಂಬ ದೂರು ಎಲ್ಲೆಡೆಯಿಂದ ಕೇಳಿ ಬರುತ್ತಿದೆ. ಇದಕ್ಕೆ ಹಲವಾರು ಕಾರಣಗಳೂ ಇವೆ.

ಬದಲಾದ ನಮ್ಮ ಜೀವನ ಶೈಲಿಯಿಂದ ಅವಸರದ ಈ ಯುಗದಲ್ಲಿ ಓದುವ ಹವ್ಯಾಸ ಕಡಿಮೆಯಾಗುತ್ತಿದೆ. ಹಾಗೇ ದೃಶ್ಯ ಮಾಧ್ಯಮಗಳ ಹಾವಳಿಯೂ ಈ ಹವ್ಯಾಸಕ್ಕೆ ನೇರ ಪೆಟ್ಟು ಕೊಟ್ಟಿದೆ. ಹಣವನ್ನು ಮಾಡುವುದೇ ಜೀವನದ ಪ್ರಮುಖ ಗುರಿಯೆಂಬ ಭೂತ ಮಿದುಳನ್ನು ಹೊಕ್ಕಂದಿನಿಂದ ಯಾವ ಹವ್ಯಾಸಗಳಿಗೂ ಈಗ ಜನರಿಗೆ ಬಿಡುವಿಲ್ಲ. ಫ್ಯಾಷನ್, ಐಷಾರಾಮದ ಬದುಕು, ಪಂಚತಾರಾ ಸಂಸ್ಕೃತಿಯೆಡೆಗೆ ಹೆಚ್ಚು ವಾಲುತ್ತಿರುವ ನಮಗೆ ಓದುವುದು, ಗಂಭೀರವಾಗಿ ಯೋಚಿಸುವುದು, ಚಿಂತಿಸುವುದು, ಓದಿದ್ದನ್ನು ಮನನ ಮಾಡುವುದು ಎಲ್ಲವೂ ಬೋರ್ ಎನ್ನಿಸುತ್ತದೆ.

ಪ್ರಿಯ ಸಖಿ, ಆದರೆ ಬೇರೆ ಯಾವ ಮಾಧ್ಯಮವೂ ನೀಡಲಾಗದಂತಹ ಸಂತೋಷವನ್ನು, ಆತ್ಮ ತೃಪ್ತಿಯನ್ನು ಪುಸ್ತಕದ ಓದು ನೀಡುತ್ತದೆ. ಉತ್ತಮ ಪುಸ್ತಕದ ಓದಿನಿಂದ ಮನಸ್ಸು ಅರಳುತ್ತದೆ. ಇದೇ ಓದಿನಿಂದ ನಮಗೆ ದೊರೆಯುವ ಪ್ರತಿಫಲ. ಹಾಗೇ ಎಲ್ಲ ಮಾಧ್ಯಮಗಳಿಗೂ ಮೂಲ ಪುಸ್ತಕಗಳೇ ಎನ್ನುವುದನ್ನು ನಾವು ಮರೆಯುವಂತಿಲ್ಲ. ಅಧ್ಯಾತ್ಮ, ಧಾರ್ಮಿಕ, ತಾತ್ವಿಕ, ಸಾಮಾಜಿಕ, ನೈತಿಕ, ಕೌಟುಂಬಿಕ,
ರಾಜಕೀಯ ಹೀಗೆ ಯಾವುದೇ ವಿಭಾಗದ ಪುಸ್ತಕವಿರಲಿ ಆ ಅಭಿರುಚಿಯಿರುವ ಓದುಗನಿಗೆ ನೆಮ್ಮದಿಯನ್ನು ನೀಡುತ್ತದೆ. ಹೊಸ ಬೆಳಕನ್ನು ಮೂಡಿಸುತ್ತದೆ.

ಸಖಿ, ಪುಸ್ತಕಕ್ಕೆ ಒಂದು ಜನಾಂಗದ ಕಣ್ಣು ತೆರೆಸುವ ಶಕ್ತಿಯಿದೆ. ಆದ್ದರಿಂದಲೇ ನಮ್ಮಲ್ಲಿ ಪುಸ್ತಕ ಪ್ರೀತಿ ಎಷ್ಟು ಬೇಗ ಮೊಳೆಯುತ್ತದೋ ಅಷ್ಟೂ ಒಳ್ಳೆಯದು. ಆ ಪ್ರೀತಿಯಿಂದ ನಾವು ಹೆಚ್ಚು ಹೆಚ್ಚು ಓದುವಂತಾಗಲಿ, ತಿಳಿಯುವಂತಾಗಲಿ, ಆರಳುವಂತಾಗಲಿ, ನೆಮ್ಮದಿ ಕಾಣುವಂತಾಗಲಿ.


Tagged:

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...