Home / ಕವನ / ಕವಿತೆ / ಸಂವಾದ

ಸಂವಾದ

ಆಕಾಶ
ಇಬ್ಬನಿಯ ಹಾಗೆ ಕರಗುತ್ತಲಿದೆ.
ಸೂರ್ಯ
ಬಾವಲಿಯಾಗಿದ್ದಾನೆ.
ಬೆಟ್ಟಗುಡ್ಡ, ಕಣಿವೆ-ಕಂದರಗಳು
ಚಂದಿರನನ್ನು ನುಂಗುತ್ತಲಿವೆ.
ಚುಕ್ಕಿಗಳ ಕಂಗಳಿಗೆ ಪೊರೆ ಬಂದಿದೆ.
ಮೋಡಗಳು ರೆಕ್ಕೆ ಕಟ್ಟಿಕೊಂಡು
ವಲಸೆ ಹೋಗುತ್ತಿವೆ.
ಕಪ್ಪನ್ನು ಹೊದ್ದ ರಸ್ತೆಗಳು
ಮುಸುಕಿನೊಳಗೆ ಬಿಕ್ಕುತ್ತಿವೆ.
ನನ್ನ ಮುದ್ದು ಕವಿತೆಯ
ಕಳೇಬರವನ್ನು ಇರುವೆಗಳು
ಮೆರವಣಿಗೆಯಲ್ಲಿ ಒಯ್ಯುತ್ತಿವೆ.

ಸಹಾಯ! ಹೆದರಿಕೆಯಾಗುತ್ತಿದೆ.


ಪುಟ್ಟ ಹುಡುಗಿ ……ಹೆದರಬೇಡ!
ನಾನಿಲ್ಲಿಯೇ ಇದ್ದೇನೆ.
ನನ್ನೆದೆಯ ಮೇಲೆ ಒರಗಿಕೊ…
ಮೆಲ್ಲಗೆ ತಟ್ಟುತ್ತೇನೆ.
ಹಿತವಾಗಿ ತೆರೆದುಕೊ…
ಸುಂದರ ಕನಸುಗಳನ್ನು ಕರೆಯುತ್ತೇನೆ.
ಬೆಚ್ಚಗೆ ಮಲಗಿಕೊ…
ನಾಳೆಗಳು ಸುಂದರವಾಗಿರುತ್ತವೆ.
ಬೆಚ್ಚಗೆ ಮಲಗಿಕೊ…
ನಾಳೆಗಳು ಸುಗಂಧಮಯವಾಗಿರುತ್ತವೆ.
ಬೆಚ್ಚಗೆ ಮಲಗಿಕೊ…
ನಾಳೆಗಳು ಸುಖಮಯವಾಗಿರುತ್ತವೆ.
ಬೆಚ್ಚಗೆ ಮಲಗಿಕೊ…


Tagged:

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...