Home / ಕವನ / ಕವಿತೆ / ಈ ಗೆಳೆತನ….

ಈ ಗೆಳೆತನ….

ನನ್ನೆಲ್ಲಾ ಪದ್ಯಗಳಲ್ಲಿರುವಂತೆ
ಇಲ್ಲೂ ತಾರೆ, ಮೋಡ, ಗಾಳಿ, ಕಡಲು, ಸೂರ್ಯರಿದ್ದಾರೆ.
ನಿನಗಿಷ್ಟವಾದರೆ ಓದು ಒತ್ತಾಯವಿಲ್ಲ
ಇಷ್ಟವಾಗದಿದ್ದರೆ ಬೇಡ
ಕಿಂಚಿತ್ತೂ ಕೋಪವಿಲ್ಲ.

ಆದರೆ ನಾನು ಪ್ರೀತಿಸುವ
ಗಾಳಿ, ಮೋಡ, ತಾರೆಯರನ್ನು
ನಿಂದಿಸಬೇಡ.
ಅವರ ಬಗ್ಗೆ ಯಾಕೆ ಬರೆಯುತ್ತಿ?
ಎಂದು ಕೇಳಬೇಡ.
ಅವರ ಬಗ್ಗೆ ಎಷ್ಟು ಬರೆಯುತ್ತಿ?
ಎಂದು ಕಾಡಬೇಡ.

ನಾನೀಗ-
ನನ್ನ-ನಿನ್ನ ಗೆಳೆತನದ ಬಗ್ಗೆ
ಬರೆಯುತ್ತಿದ್ದೇನೆ.
ನಿನ್ನ ಗೈರು ಹಾಜರಿಯಲ್ಲಿ
ತಾರೆ, ಸೂರ್ಯ, ಮೋಡ, ಗಾಳಿ
ನನ್ನ ಜತೆಯಲ್ಲಿದ್ದಾರೆ.

ಈ ಗೆಳೆತನ ಮೋಡಗಳ ಹಾಗೆ.
ನಾಲ್ಕು ಹನಿ ತಂಪು ಚೆಲ್ಲುತ್ತೇನೆ
ಎಂದು ಹೇಳುವುದಿಲ್ಲ.
ಚೆಲ್ಲಬೇಡ ಎಂದರೆ
ಕೇಳುವುದೂ ಇಲ್ಲ.

ಈ ಗೆಳೆತನ ಕಡಲೊಳಗಿನ
ಅಲೆಗಳ ಹಾಗೆ.
ತಡಿಯಲ್ಲಿ ನಿಂತರೆ ಓಡಿಬಂದು
ಕಾಲನ್ನು ಚುಂಬಿಸುತ್ತದೆ.
ಚುಂಬಿಸುತ್ತೇನೆ ಎಂದು ಹೇಳುವುದಿಲ್ಲ
ಚುಂಬಿಸಬೇಡ ಎಂದರೆ
ಕೇಳುವುದೂ ಇಲ್ಲ.

ಈ ಗೆಳೆತನ ಗಾಳಿಯ ಹಾಗೆ.
ಎದೆಯೊಳಗೆ ನುಗ್ಗಿ ಹೊರಬರುತ್ತದೆ.
ಹೋಗುತ್ತೇನೆ ಎಂದು ಹೇಳುವುದಿಲ್ಲ.
ಹೋಗಬೇಡ ಎಂದರೆ
ಕೇಳುವುದೂ ಇಲ್ಲ.

ಆದರೂ ಅನಿಸುತ್ತದೆ.
ಒಮ್ಮೊಮ್ಮೆ ಈ ಗೆಳೆತನ
ಧೂಳಿನ ಹಾಗೆ ಮೆತ್ತಿಕೊಳ್ಳುತ್ತದೆ.
ಕೊಡವಿದರೆ ಚದುರಿ
ಚೆಲ್ಲಿ ಹೋಗುತ್ತದೆ.

ಹೌದು
ನನ್ನ-ನಿನ್ನ ಗೆಳೆತನದಲ್ಲಿ
ಮೆಚ್ಚುವಂಥಾದ್ದು ಇದೆ
ಚುಚ್ಚುವಂಥಾದ್ದು ಇದೆ
ಕೊಚ್ಚಿ ಹರಿದು ಹೋಗುವಂಥಾದ್ದು ಇದೆ.

ಅಂದಹಾಗೆ ಗೆಳೆಯಾ…
ಈ ಗೆಳೆತನದಲ್ಲಿ ನಾನು
ಶಾಮೀಲಾಗಿದ್ದರೂ ಇದು
ಇಡಿಯಾಗಿ ನಿನ್ನನ್ನು ಕುರಿತೆ
ಬರೆದ ಕವನ. ನಿಜ,
ಬರೆ ಎಂದೇನೂ ನೀನು ಕೇಳಿಲ್ಲ.
ಆದರೆ ಬರೆಯಬೇಡ ಎಂದರೆ ನಾನು ಕೇಳುವುದೂ ಇಲ್ಲ.


Tagged:

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ