Home / ಕವನ / ಕವಿತೆ / ಈ ಗೆಳೆತನ….

ಈ ಗೆಳೆತನ….

ನನ್ನೆಲ್ಲಾ ಪದ್ಯಗಳಲ್ಲಿರುವಂತೆ
ಇಲ್ಲೂ ತಾರೆ, ಮೋಡ, ಗಾಳಿ, ಕಡಲು, ಸೂರ್ಯರಿದ್ದಾರೆ.
ನಿನಗಿಷ್ಟವಾದರೆ ಓದು ಒತ್ತಾಯವಿಲ್ಲ
ಇಷ್ಟವಾಗದಿದ್ದರೆ ಬೇಡ
ಕಿಂಚಿತ್ತೂ ಕೋಪವಿಲ್ಲ.

ಆದರೆ ನಾನು ಪ್ರೀತಿಸುವ
ಗಾಳಿ, ಮೋಡ, ತಾರೆಯರನ್ನು
ನಿಂದಿಸಬೇಡ.
ಅವರ ಬಗ್ಗೆ ಯಾಕೆ ಬರೆಯುತ್ತಿ?
ಎಂದು ಕೇಳಬೇಡ.
ಅವರ ಬಗ್ಗೆ ಎಷ್ಟು ಬರೆಯುತ್ತಿ?
ಎಂದು ಕಾಡಬೇಡ.

ನಾನೀಗ-
ನನ್ನ-ನಿನ್ನ ಗೆಳೆತನದ ಬಗ್ಗೆ
ಬರೆಯುತ್ತಿದ್ದೇನೆ.
ನಿನ್ನ ಗೈರು ಹಾಜರಿಯಲ್ಲಿ
ತಾರೆ, ಸೂರ್ಯ, ಮೋಡ, ಗಾಳಿ
ನನ್ನ ಜತೆಯಲ್ಲಿದ್ದಾರೆ.

ಈ ಗೆಳೆತನ ಮೋಡಗಳ ಹಾಗೆ.
ನಾಲ್ಕು ಹನಿ ತಂಪು ಚೆಲ್ಲುತ್ತೇನೆ
ಎಂದು ಹೇಳುವುದಿಲ್ಲ.
ಚೆಲ್ಲಬೇಡ ಎಂದರೆ
ಕೇಳುವುದೂ ಇಲ್ಲ.

ಈ ಗೆಳೆತನ ಕಡಲೊಳಗಿನ
ಅಲೆಗಳ ಹಾಗೆ.
ತಡಿಯಲ್ಲಿ ನಿಂತರೆ ಓಡಿಬಂದು
ಕಾಲನ್ನು ಚುಂಬಿಸುತ್ತದೆ.
ಚುಂಬಿಸುತ್ತೇನೆ ಎಂದು ಹೇಳುವುದಿಲ್ಲ
ಚುಂಬಿಸಬೇಡ ಎಂದರೆ
ಕೇಳುವುದೂ ಇಲ್ಲ.

ಈ ಗೆಳೆತನ ಗಾಳಿಯ ಹಾಗೆ.
ಎದೆಯೊಳಗೆ ನುಗ್ಗಿ ಹೊರಬರುತ್ತದೆ.
ಹೋಗುತ್ತೇನೆ ಎಂದು ಹೇಳುವುದಿಲ್ಲ.
ಹೋಗಬೇಡ ಎಂದರೆ
ಕೇಳುವುದೂ ಇಲ್ಲ.

ಆದರೂ ಅನಿಸುತ್ತದೆ.
ಒಮ್ಮೊಮ್ಮೆ ಈ ಗೆಳೆತನ
ಧೂಳಿನ ಹಾಗೆ ಮೆತ್ತಿಕೊಳ್ಳುತ್ತದೆ.
ಕೊಡವಿದರೆ ಚದುರಿ
ಚೆಲ್ಲಿ ಹೋಗುತ್ತದೆ.

ಹೌದು
ನನ್ನ-ನಿನ್ನ ಗೆಳೆತನದಲ್ಲಿ
ಮೆಚ್ಚುವಂಥಾದ್ದು ಇದೆ
ಚುಚ್ಚುವಂಥಾದ್ದು ಇದೆ
ಕೊಚ್ಚಿ ಹರಿದು ಹೋಗುವಂಥಾದ್ದು ಇದೆ.

ಅಂದಹಾಗೆ ಗೆಳೆಯಾ…
ಈ ಗೆಳೆತನದಲ್ಲಿ ನಾನು
ಶಾಮೀಲಾಗಿದ್ದರೂ ಇದು
ಇಡಿಯಾಗಿ ನಿನ್ನನ್ನು ಕುರಿತೆ
ಬರೆದ ಕವನ. ನಿಜ,
ಬರೆ ಎಂದೇನೂ ನೀನು ಕೇಳಿಲ್ಲ.
ಆದರೆ ಬರೆಯಬೇಡ ಎಂದರೆ ನಾನು ಕೇಳುವುದೂ ಇಲ್ಲ.


Tagged:

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...