Home / ಕವನ / ಕವಿತೆ / ಈ ಗೆಳೆತನ….

ಈ ಗೆಳೆತನ….

ನನ್ನೆಲ್ಲಾ ಪದ್ಯಗಳಲ್ಲಿರುವಂತೆ
ಇಲ್ಲೂ ತಾರೆ, ಮೋಡ, ಗಾಳಿ, ಕಡಲು, ಸೂರ್ಯರಿದ್ದಾರೆ.
ನಿನಗಿಷ್ಟವಾದರೆ ಓದು ಒತ್ತಾಯವಿಲ್ಲ
ಇಷ್ಟವಾಗದಿದ್ದರೆ ಬೇಡ
ಕಿಂಚಿತ್ತೂ ಕೋಪವಿಲ್ಲ.

ಆದರೆ ನಾನು ಪ್ರೀತಿಸುವ
ಗಾಳಿ, ಮೋಡ, ತಾರೆಯರನ್ನು
ನಿಂದಿಸಬೇಡ.
ಅವರ ಬಗ್ಗೆ ಯಾಕೆ ಬರೆಯುತ್ತಿ?
ಎಂದು ಕೇಳಬೇಡ.
ಅವರ ಬಗ್ಗೆ ಎಷ್ಟು ಬರೆಯುತ್ತಿ?
ಎಂದು ಕಾಡಬೇಡ.

ನಾನೀಗ-
ನನ್ನ-ನಿನ್ನ ಗೆಳೆತನದ ಬಗ್ಗೆ
ಬರೆಯುತ್ತಿದ್ದೇನೆ.
ನಿನ್ನ ಗೈರು ಹಾಜರಿಯಲ್ಲಿ
ತಾರೆ, ಸೂರ್ಯ, ಮೋಡ, ಗಾಳಿ
ನನ್ನ ಜತೆಯಲ್ಲಿದ್ದಾರೆ.

ಈ ಗೆಳೆತನ ಮೋಡಗಳ ಹಾಗೆ.
ನಾಲ್ಕು ಹನಿ ತಂಪು ಚೆಲ್ಲುತ್ತೇನೆ
ಎಂದು ಹೇಳುವುದಿಲ್ಲ.
ಚೆಲ್ಲಬೇಡ ಎಂದರೆ
ಕೇಳುವುದೂ ಇಲ್ಲ.

ಈ ಗೆಳೆತನ ಕಡಲೊಳಗಿನ
ಅಲೆಗಳ ಹಾಗೆ.
ತಡಿಯಲ್ಲಿ ನಿಂತರೆ ಓಡಿಬಂದು
ಕಾಲನ್ನು ಚುಂಬಿಸುತ್ತದೆ.
ಚುಂಬಿಸುತ್ತೇನೆ ಎಂದು ಹೇಳುವುದಿಲ್ಲ
ಚುಂಬಿಸಬೇಡ ಎಂದರೆ
ಕೇಳುವುದೂ ಇಲ್ಲ.

ಈ ಗೆಳೆತನ ಗಾಳಿಯ ಹಾಗೆ.
ಎದೆಯೊಳಗೆ ನುಗ್ಗಿ ಹೊರಬರುತ್ತದೆ.
ಹೋಗುತ್ತೇನೆ ಎಂದು ಹೇಳುವುದಿಲ್ಲ.
ಹೋಗಬೇಡ ಎಂದರೆ
ಕೇಳುವುದೂ ಇಲ್ಲ.

ಆದರೂ ಅನಿಸುತ್ತದೆ.
ಒಮ್ಮೊಮ್ಮೆ ಈ ಗೆಳೆತನ
ಧೂಳಿನ ಹಾಗೆ ಮೆತ್ತಿಕೊಳ್ಳುತ್ತದೆ.
ಕೊಡವಿದರೆ ಚದುರಿ
ಚೆಲ್ಲಿ ಹೋಗುತ್ತದೆ.

ಹೌದು
ನನ್ನ-ನಿನ್ನ ಗೆಳೆತನದಲ್ಲಿ
ಮೆಚ್ಚುವಂಥಾದ್ದು ಇದೆ
ಚುಚ್ಚುವಂಥಾದ್ದು ಇದೆ
ಕೊಚ್ಚಿ ಹರಿದು ಹೋಗುವಂಥಾದ್ದು ಇದೆ.

ಅಂದಹಾಗೆ ಗೆಳೆಯಾ…
ಈ ಗೆಳೆತನದಲ್ಲಿ ನಾನು
ಶಾಮೀಲಾಗಿದ್ದರೂ ಇದು
ಇಡಿಯಾಗಿ ನಿನ್ನನ್ನು ಕುರಿತೆ
ಬರೆದ ಕವನ. ನಿಜ,
ಬರೆ ಎಂದೇನೂ ನೀನು ಕೇಳಿಲ್ಲ.
ಆದರೆ ಬರೆಯಬೇಡ ಎಂದರೆ ನಾನು ಕೇಳುವುದೂ ಇಲ್ಲ.


Tagged:

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...