Home / ಕವನ / ಕವಿತೆ / ಪ್ರಾರ್ಥನೆ

ಪ್ರಾರ್ಥನೆ

ನೀವು ನಗೆ ದೀವಟಿಗೆಗಳನ್ನು
ಖರೀದಿಸುತ್ತೀರಾ?
ನೀವು ಚಿಗಿತ ಆಸೆಗಳನ್ನು
ಖರೀದಿಸುತ್ತೀರಾ?
ನೀವು ಕುಪ್ಪಳಿಸುವ ಕನಸುಗಳನ್ನು
ಖರೀದಿಸುತ್ತೀರಾ?
ಹಾಗದರೆ ನಮ್ಮಲ್ಲಿಗೆ ಬನ್ನಿ.
ನಮ್ಮಲ್ಲಿ ಲಾಟರಿ ಟಿಕೇಟು
ಮಾರುವ ಪುಟ್ಟ ಹುಡುಗರಿದ್ದಾರೆ.
ಕಣ್ಣಲ್ಲೆ ಕಟ್ಟಿ ಹಾಕುತ್ತಾರೆ.
ಪ್ರೀತಿಯಿಂದ ಅಂಟಿಕೊಳ್ಳುತ್ತಾರೆ.
ಆಸೆ-ಕನಸುಗಳನ್ನು ಹರವಿ
ಬೆಲೆ ಮಂಡಿಸುತ್ತಾರೆ.
ಒಂದು ರೂಪಾಯಿ ತೆತ್ತು ಖರೀದಿಸಿದರೆ
ಕೈ ಮುಗಿದು ಕೃತಜ್ಞತೆ ಸಲ್ಲಿಸುತ್ತಾರೆ.
ಶುಭ ಹಾರೈಸುತ್ತಾ ಬೀಳ್ಕೊಡುತ್ತಾರೆ.

ಅಂತೆಯೆ…
ಒಮ್ಮೆ ನಮ್ಮಲ್ಲಿಗೆ ಬನ್ನಿ.
ನಮ್ಮ ಹುಡುಗರ ತುಟಿಯಂಚಿನ
ನಗೆಯನ್ನು ಖರೀದಿಸಿ.
ನಮ್ಮ ಹುಡುಗರ ಕಣ್ಣಂಚಿನ
ಕನಸುಗಳನ್ನು ಖರೀದಿಸಿ.
ನಮ್ಮ ಹುಡುಗರ ಮೋರೆಯಲ್ಲಿ
ಚಿಗಿತ ಆಸೆಗಳನ್ನು ಖರೀದಿಸಿ.
ನಮ್ಮ ಹುಡುಗರ ನಾಳೆಗಳನ್ನು
ನಿಮ್ಮ ಜೇಬುಗಳಲ್ಲಿ
ಭದ್ರಪಡಿಸಿ ಸಂರಕ್ಷಿಸಿ.


Tagged:

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...