Home / ಕವನ / ಕವಿತೆ / ಕುದುರೆ ಮತ್ತು ಮುತ್ತುಗಳು

ಕುದುರೆ ಮತ್ತು ಮುತ್ತುಗಳು

ಮುತ್ತಿನಂತಹ ಅಕ್ಕಂದಿರಿಬ್ಬರನ್ನು
ಕುದುರೆಯೊಂದು ಕೆಡವಿ
ಕಂಗೆಡಿಸಿದ ಸುದ್ದಿ
ನಿಮಗೂ ತಲುಪಿರಬಹುದು

ಅಕ್ಕಂದಿರೇ ಹುಚ್ಚುತನದಿಂದ
ಕುದುರೆಯನ್ನು ಕೆಣಕಿ ಕಂಗೆಟ್ಟರೆಂದು
ಹಬ್ಬಿಸಿದ ಸುದ್ದಿಯನ್ನು
ನೀವು ನಂಬಿರಲೂಬಹುದು.

ಬಯಲೊಳಗೆ
ಬಯಲಾದರಂತೆ ಅಕ್ಕಂದಿರು
ಧೂಳೊಳಗೆ ಮೈ ಮುಚ್ಚಿಕೊಂಡವರನ್ನು
ಮೆರವಣಿಗೆಯಲ್ಲಿ ಕುಣಿಸಿದರಂತೆ
ಮಾನವಂತರು.

ಎಚ್ಚರವಾಗಿರುವ ರಸ್ತೆಗಳೆ
ನೀವು ಕಂಡಿರೆ… ನೀವು ಕಂಡಿರೆ….
ಸುಡುವ ಸೂರ್ಯಗಳೆ
ನೀವು ಕಂಡಿರೆ… ನೀವು ಕಂಡಿರೆ….
ಮೈ ತುಂಬ ಎಲೆರೆಪ್ಪೆಗಳನ್ನು
ಅಂಟಿಸಿಕೊಂಡಿರುವ ಮರಗಳೆ
ನೀವು ಕಂಡಿರೆ… ನೀವು ಕಂಡಿರೆ…

ನನ್ನಕ್ಕಂದಿರನ್ನು ಹಣ್ಣು ಮಾಡಿದ
ಹುಣ್ಣುಗಳಾರು ನೀವು ಹೇಳಿರೆ…
ನನ್ನಕ್ಕಂದಿರ ಹೃದಯ ಗೋರಿಗೊಳಿಸಿ
ವಿಜಯಪತಾಕೆ ಹಾರಿಸಿದ
ಶೂರರಾರು ನೀವು ಹೇಳಿರೆ…
ಎಂದು ಪ್ರಲಾಪಿಸುವುದು ವ್ಯಥ.

ಎಲ್ಲರ ಒಳಹೊಕ್ಕು ಶೋಧಿಸುವ
ಗಾಳಿಗೆ ಮಾತು ಬರುವಂತಿದ್ದರೆ?!
ಮಾತಿರಲಿ-
ಮೌನವನ್ನು ಮಣಿಸಬಲ್ಲ
ಮಹಾಶಯರಿರುವ ಈ ನಾಡಿನಲ್ಲಿ
ಕುದುರೆಯ ಕೆನೆತವಷ್ಟೆ ಸತ್ಯ.
ಉಳಿದದ್ದೆಲ್ಲ ಮಿಥ್ಯ.


Tagged:

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...