ಕುದುರೆ ಮತ್ತು ಮುತ್ತುಗಳು

ಮುತ್ತಿನಂತಹ ಅಕ್ಕಂದಿರಿಬ್ಬರನ್ನು
ಕುದುರೆಯೊಂದು ಕೆಡವಿ
ಕಂಗೆಡಿಸಿದ ಸುದ್ದಿ
ನಿಮಗೂ ತಲುಪಿರಬಹುದು

ಅಕ್ಕಂದಿರೇ ಹುಚ್ಚುತನದಿಂದ
ಕುದುರೆಯನ್ನು ಕೆಣಕಿ ಕಂಗೆಟ್ಟರೆಂದು
ಹಬ್ಬಿಸಿದ ಸುದ್ದಿಯನ್ನು
ನೀವು ನಂಬಿರಲೂಬಹುದು.

ಬಯಲೊಳಗೆ
ಬಯಲಾದರಂತೆ ಅಕ್ಕಂದಿರು
ಧೂಳೊಳಗೆ ಮೈ ಮುಚ್ಚಿಕೊಂಡವರನ್ನು
ಮೆರವಣಿಗೆಯಲ್ಲಿ ಕುಣಿಸಿದರಂತೆ
ಮಾನವಂತರು.

ಎಚ್ಚರವಾಗಿರುವ ರಸ್ತೆಗಳೆ
ನೀವು ಕಂಡಿರೆ… ನೀವು ಕಂಡಿರೆ….
ಸುಡುವ ಸೂರ್ಯಗಳೆ
ನೀವು ಕಂಡಿರೆ… ನೀವು ಕಂಡಿರೆ….
ಮೈ ತುಂಬ ಎಲೆರೆಪ್ಪೆಗಳನ್ನು
ಅಂಟಿಸಿಕೊಂಡಿರುವ ಮರಗಳೆ
ನೀವು ಕಂಡಿರೆ… ನೀವು ಕಂಡಿರೆ…

ನನ್ನಕ್ಕಂದಿರನ್ನು ಹಣ್ಣು ಮಾಡಿದ
ಹುಣ್ಣುಗಳಾರು ನೀವು ಹೇಳಿರೆ…
ನನ್ನಕ್ಕಂದಿರ ಹೃದಯ ಗೋರಿಗೊಳಿಸಿ
ವಿಜಯಪತಾಕೆ ಹಾರಿಸಿದ
ಶೂರರಾರು ನೀವು ಹೇಳಿರೆ…
ಎಂದು ಪ್ರಲಾಪಿಸುವುದು ವ್ಯಥ.

ಎಲ್ಲರ ಒಳಹೊಕ್ಕು ಶೋಧಿಸುವ
ಗಾಳಿಗೆ ಮಾತು ಬರುವಂತಿದ್ದರೆ?!
ಮಾತಿರಲಿ-
ಮೌನವನ್ನು ಮಣಿಸಬಲ್ಲ
ಮಹಾಶಯರಿರುವ ಈ ನಾಡಿನಲ್ಲಿ
ಕುದುರೆಯ ಕೆನೆತವಷ್ಟೆ ಸತ್ಯ.
ಉಳಿದದ್ದೆಲ್ಲ ಮಿಥ್ಯ.


Previous post ಬದುಕು
Next post ವಿಧಿ ಬರಹ

ಸಣ್ಣ ಕತೆ

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಮೇಷ್ಟ್ರು ವೆಂಕಟಸುಬ್ಬಯ್ಯ

    ಪ್ರಕರಣ ೧೨ ಜನಾರ್ದನಪುರಕ್ಕೆ ರಂಗಣ್ಣ ಹಿಂದಿರುಗಿದ್ದಾಯಿತು. ತಿಮ್ಮರಾಯಪ್ಪ ಹೇಳಿ ಕೊಟ್ಟಿದ್ದ ಹಾಗೆ ಕಲ್ಲೇಗೌಡರಿಗೆ ಕಾಗದಗಳನ್ನು ಬರೆದದ್ದೂ ಆಯಿತು. ಕಡೆಗೆ ರಿಜಿಸ್ಟರ್ಡ್ ಕಾಗದವನ್ನೂ ಅದಕ್ಕೆ ಒಂದು ಜ್ಞಾಪಕದೋಲೆಯನ್ನೂ ಕಳಿಸಿದ್ದಾಯಿತು.… Read more…

  • ಕನಸು ದಿಟವಾಯಿತು

    ಪ್ರಕರಣ ೨ ಸೂರ್ಯೋದಯವಾಯಿತು. ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ಕಾಫಿ ಸೇವನೆಯನ್ನು ಮಾಡುತ್ತಾ ರಂಗಣ್ಣನು ಹೆಂಡತಿಗೆ ಕನಸಿನ ಸಮಾಚಾರವನ್ನು ತಿಳಿಸಿದನು. ಆಕೆ- ಸರಿ, ಇನ್ನು ಈ ಹುಚ್ಚೊಂದು ನಿಮಗೆ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…