Home / ಕವನ / ಕವಿತೆ / ಕುದುರೆ ಮತ್ತು ಮುತ್ತುಗಳು

ಕುದುರೆ ಮತ್ತು ಮುತ್ತುಗಳು

ಮುತ್ತಿನಂತಹ ಅಕ್ಕಂದಿರಿಬ್ಬರನ್ನು
ಕುದುರೆಯೊಂದು ಕೆಡವಿ
ಕಂಗೆಡಿಸಿದ ಸುದ್ದಿ
ನಿಮಗೂ ತಲುಪಿರಬಹುದು

ಅಕ್ಕಂದಿರೇ ಹುಚ್ಚುತನದಿಂದ
ಕುದುರೆಯನ್ನು ಕೆಣಕಿ ಕಂಗೆಟ್ಟರೆಂದು
ಹಬ್ಬಿಸಿದ ಸುದ್ದಿಯನ್ನು
ನೀವು ನಂಬಿರಲೂಬಹುದು.

ಬಯಲೊಳಗೆ
ಬಯಲಾದರಂತೆ ಅಕ್ಕಂದಿರು
ಧೂಳೊಳಗೆ ಮೈ ಮುಚ್ಚಿಕೊಂಡವರನ್ನು
ಮೆರವಣಿಗೆಯಲ್ಲಿ ಕುಣಿಸಿದರಂತೆ
ಮಾನವಂತರು.

ಎಚ್ಚರವಾಗಿರುವ ರಸ್ತೆಗಳೆ
ನೀವು ಕಂಡಿರೆ… ನೀವು ಕಂಡಿರೆ….
ಸುಡುವ ಸೂರ್ಯಗಳೆ
ನೀವು ಕಂಡಿರೆ… ನೀವು ಕಂಡಿರೆ….
ಮೈ ತುಂಬ ಎಲೆರೆಪ್ಪೆಗಳನ್ನು
ಅಂಟಿಸಿಕೊಂಡಿರುವ ಮರಗಳೆ
ನೀವು ಕಂಡಿರೆ… ನೀವು ಕಂಡಿರೆ…

ನನ್ನಕ್ಕಂದಿರನ್ನು ಹಣ್ಣು ಮಾಡಿದ
ಹುಣ್ಣುಗಳಾರು ನೀವು ಹೇಳಿರೆ…
ನನ್ನಕ್ಕಂದಿರ ಹೃದಯ ಗೋರಿಗೊಳಿಸಿ
ವಿಜಯಪತಾಕೆ ಹಾರಿಸಿದ
ಶೂರರಾರು ನೀವು ಹೇಳಿರೆ…
ಎಂದು ಪ್ರಲಾಪಿಸುವುದು ವ್ಯಥ.

ಎಲ್ಲರ ಒಳಹೊಕ್ಕು ಶೋಧಿಸುವ
ಗಾಳಿಗೆ ಮಾತು ಬರುವಂತಿದ್ದರೆ?!
ಮಾತಿರಲಿ-
ಮೌನವನ್ನು ಮಣಿಸಬಲ್ಲ
ಮಹಾಶಯರಿರುವ ಈ ನಾಡಿನಲ್ಲಿ
ಕುದುರೆಯ ಕೆನೆತವಷ್ಟೆ ಸತ್ಯ.
ಉಳಿದದ್ದೆಲ್ಲ ಮಿಥ್ಯ.


Tagged:

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...