Home / ಕವನ / ಕವಿತೆ / ಕುದುರೆ ಮತ್ತು ಮುತ್ತುಗಳು

ಕುದುರೆ ಮತ್ತು ಮುತ್ತುಗಳು

ಮುತ್ತಿನಂತಹ ಅಕ್ಕಂದಿರಿಬ್ಬರನ್ನು
ಕುದುರೆಯೊಂದು ಕೆಡವಿ
ಕಂಗೆಡಿಸಿದ ಸುದ್ದಿ
ನಿಮಗೂ ತಲುಪಿರಬಹುದು

ಅಕ್ಕಂದಿರೇ ಹುಚ್ಚುತನದಿಂದ
ಕುದುರೆಯನ್ನು ಕೆಣಕಿ ಕಂಗೆಟ್ಟರೆಂದು
ಹಬ್ಬಿಸಿದ ಸುದ್ದಿಯನ್ನು
ನೀವು ನಂಬಿರಲೂಬಹುದು.

ಬಯಲೊಳಗೆ
ಬಯಲಾದರಂತೆ ಅಕ್ಕಂದಿರು
ಧೂಳೊಳಗೆ ಮೈ ಮುಚ್ಚಿಕೊಂಡವರನ್ನು
ಮೆರವಣಿಗೆಯಲ್ಲಿ ಕುಣಿಸಿದರಂತೆ
ಮಾನವಂತರು.

ಎಚ್ಚರವಾಗಿರುವ ರಸ್ತೆಗಳೆ
ನೀವು ಕಂಡಿರೆ… ನೀವು ಕಂಡಿರೆ….
ಸುಡುವ ಸೂರ್ಯಗಳೆ
ನೀವು ಕಂಡಿರೆ… ನೀವು ಕಂಡಿರೆ….
ಮೈ ತುಂಬ ಎಲೆರೆಪ್ಪೆಗಳನ್ನು
ಅಂಟಿಸಿಕೊಂಡಿರುವ ಮರಗಳೆ
ನೀವು ಕಂಡಿರೆ… ನೀವು ಕಂಡಿರೆ…

ನನ್ನಕ್ಕಂದಿರನ್ನು ಹಣ್ಣು ಮಾಡಿದ
ಹುಣ್ಣುಗಳಾರು ನೀವು ಹೇಳಿರೆ…
ನನ್ನಕ್ಕಂದಿರ ಹೃದಯ ಗೋರಿಗೊಳಿಸಿ
ವಿಜಯಪತಾಕೆ ಹಾರಿಸಿದ
ಶೂರರಾರು ನೀವು ಹೇಳಿರೆ…
ಎಂದು ಪ್ರಲಾಪಿಸುವುದು ವ್ಯಥ.

ಎಲ್ಲರ ಒಳಹೊಕ್ಕು ಶೋಧಿಸುವ
ಗಾಳಿಗೆ ಮಾತು ಬರುವಂತಿದ್ದರೆ?!
ಮಾತಿರಲಿ-
ಮೌನವನ್ನು ಮಣಿಸಬಲ್ಲ
ಮಹಾಶಯರಿರುವ ಈ ನಾಡಿನಲ್ಲಿ
ಕುದುರೆಯ ಕೆನೆತವಷ್ಟೆ ಸತ್ಯ.
ಉಳಿದದ್ದೆಲ್ಲ ಮಿಥ್ಯ.


Tagged:

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...