Home / ಕವನ / ಕವಿತೆ / ಕುದುರೆ ಮತ್ತು ಮುತ್ತುಗಳು

ಕುದುರೆ ಮತ್ತು ಮುತ್ತುಗಳು

ಮುತ್ತಿನಂತಹ ಅಕ್ಕಂದಿರಿಬ್ಬರನ್ನು
ಕುದುರೆಯೊಂದು ಕೆಡವಿ
ಕಂಗೆಡಿಸಿದ ಸುದ್ದಿ
ನಿಮಗೂ ತಲುಪಿರಬಹುದು

ಅಕ್ಕಂದಿರೇ ಹುಚ್ಚುತನದಿಂದ
ಕುದುರೆಯನ್ನು ಕೆಣಕಿ ಕಂಗೆಟ್ಟರೆಂದು
ಹಬ್ಬಿಸಿದ ಸುದ್ದಿಯನ್ನು
ನೀವು ನಂಬಿರಲೂಬಹುದು.

ಬಯಲೊಳಗೆ
ಬಯಲಾದರಂತೆ ಅಕ್ಕಂದಿರು
ಧೂಳೊಳಗೆ ಮೈ ಮುಚ್ಚಿಕೊಂಡವರನ್ನು
ಮೆರವಣಿಗೆಯಲ್ಲಿ ಕುಣಿಸಿದರಂತೆ
ಮಾನವಂತರು.

ಎಚ್ಚರವಾಗಿರುವ ರಸ್ತೆಗಳೆ
ನೀವು ಕಂಡಿರೆ… ನೀವು ಕಂಡಿರೆ….
ಸುಡುವ ಸೂರ್ಯಗಳೆ
ನೀವು ಕಂಡಿರೆ… ನೀವು ಕಂಡಿರೆ….
ಮೈ ತುಂಬ ಎಲೆರೆಪ್ಪೆಗಳನ್ನು
ಅಂಟಿಸಿಕೊಂಡಿರುವ ಮರಗಳೆ
ನೀವು ಕಂಡಿರೆ… ನೀವು ಕಂಡಿರೆ…

ನನ್ನಕ್ಕಂದಿರನ್ನು ಹಣ್ಣು ಮಾಡಿದ
ಹುಣ್ಣುಗಳಾರು ನೀವು ಹೇಳಿರೆ…
ನನ್ನಕ್ಕಂದಿರ ಹೃದಯ ಗೋರಿಗೊಳಿಸಿ
ವಿಜಯಪತಾಕೆ ಹಾರಿಸಿದ
ಶೂರರಾರು ನೀವು ಹೇಳಿರೆ…
ಎಂದು ಪ್ರಲಾಪಿಸುವುದು ವ್ಯಥ.

ಎಲ್ಲರ ಒಳಹೊಕ್ಕು ಶೋಧಿಸುವ
ಗಾಳಿಗೆ ಮಾತು ಬರುವಂತಿದ್ದರೆ?!
ಮಾತಿರಲಿ-
ಮೌನವನ್ನು ಮಣಿಸಬಲ್ಲ
ಮಹಾಶಯರಿರುವ ಈ ನಾಡಿನಲ್ಲಿ
ಕುದುರೆಯ ಕೆನೆತವಷ್ಟೆ ಸತ್ಯ.
ಉಳಿದದ್ದೆಲ್ಲ ಮಿಥ್ಯ.


Tagged:

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...