ಯುದ್ಧ

ನಾನು ನನ್ನ ದೇಶದ ಗಡಿಯನ್ನು
ಕೊಳೆಯದ ಹೆಣಕ್ಕೆ ಹೋಲಿಸುತ್ತೇನೆ.
ನಿತ್ಯ ಕಾವಲು ಕಾಯುವ ನೂರು
ಕಣ್ಣುಗಳಿಗಾಗಿ ದುಃಖಿಸುತ್ತೇನೆ.

ಹಸಿರು ಉಸಿರಾಡದ ಮರಗಳಿಗಾಗಿ
ಗೂಡು ಕಟ್ಟದ ಹಕ್ಕಿಗಳಿಗಾಗಿ
ಬೇವನ್ನೆ ನೆಚ್ಚಿ ಸಾಯುವ ಕೋಗಿಲೆಗಳಿಗಾಗಿ
ದುಃಖಿಸುತ್ತೇನೆ.

ನೀರವತೆಯಲ್ಲಿ ನರ್ತಿಸುವ
ಸದ್ದುಗಳ-ಆಕ್ರಂದನಗಳ
ಜುಗಲಬಂದಿ
ನನ್ನನ್ನು ಕಂಗೆಡಿಸುತ್ತದೆ.

ಕೆಂಪು ಸೂರ್ಯನನ್ನು ಹಣೆಗಿರಿಸಿಕೊಂಡು
ಹಳದಿ ಸೇವಂತಿಗೆಯನ್ನು ಮುಡಿಗಿರಿಸಿಕೊಂಡು
ನರೀಕ್ಷೆಯಲ್ಲೆ ನಲುಗಿಹೋಗುವ
ನೂರು ಹೆಣ್ಣುಗಳಿಗಾಗಿ ದುಃಖಿಸುತ್ತೇನೆ.

ಬೆಳದಿಂಗಳ ರಾತ್ರಿಗಳನ್ನು
ಮಲ್ಲಿಗೆ ಹಗಲುಗಳನ್ನು
ಮುದ್ದಿಸಬೇಕಾದ ಕಣ್ಣುಗಳು
ಯಮನ ಕಣ್ಣುಗಳಲ್ಲಿ
ಮುಗುಳು ನಗುವುದು
ನನ್ನನ್ನು ಕಂಗೆಡಿಸುತ್ತದೆ.

ಯುದ್ಧ ನನ್ನನ್ನು ಕಂಗೆಡಿಸುತ್ತದೆ.
ಬುದ್ಧ ನನ್ನನ್ನು ಸಂತೈಸುತ್ತಾನೆ.


Previous post ದೂರ ಹತ್ತಿರ
Next post ಅಪವ್ಯಯ

ಸಣ್ಣ ಕತೆ

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…