ಯುದ್ಧ

ನಾನು ನನ್ನ ದೇಶದ ಗಡಿಯನ್ನು
ಕೊಳೆಯದ ಹೆಣಕ್ಕೆ ಹೋಲಿಸುತ್ತೇನೆ.
ನಿತ್ಯ ಕಾವಲು ಕಾಯುವ ನೂರು
ಕಣ್ಣುಗಳಿಗಾಗಿ ದುಃಖಿಸುತ್ತೇನೆ.

ಹಸಿರು ಉಸಿರಾಡದ ಮರಗಳಿಗಾಗಿ
ಗೂಡು ಕಟ್ಟದ ಹಕ್ಕಿಗಳಿಗಾಗಿ
ಬೇವನ್ನೆ ನೆಚ್ಚಿ ಸಾಯುವ ಕೋಗಿಲೆಗಳಿಗಾಗಿ
ದುಃಖಿಸುತ್ತೇನೆ.

ನೀರವತೆಯಲ್ಲಿ ನರ್ತಿಸುವ
ಸದ್ದುಗಳ-ಆಕ್ರಂದನಗಳ
ಜುಗಲಬಂದಿ
ನನ್ನನ್ನು ಕಂಗೆಡಿಸುತ್ತದೆ.

ಕೆಂಪು ಸೂರ್ಯನನ್ನು ಹಣೆಗಿರಿಸಿಕೊಂಡು
ಹಳದಿ ಸೇವಂತಿಗೆಯನ್ನು ಮುಡಿಗಿರಿಸಿಕೊಂಡು
ನರೀಕ್ಷೆಯಲ್ಲೆ ನಲುಗಿಹೋಗುವ
ನೂರು ಹೆಣ್ಣುಗಳಿಗಾಗಿ ದುಃಖಿಸುತ್ತೇನೆ.

ಬೆಳದಿಂಗಳ ರಾತ್ರಿಗಳನ್ನು
ಮಲ್ಲಿಗೆ ಹಗಲುಗಳನ್ನು
ಮುದ್ದಿಸಬೇಕಾದ ಕಣ್ಣುಗಳು
ಯಮನ ಕಣ್ಣುಗಳಲ್ಲಿ
ಮುಗುಳು ನಗುವುದು
ನನ್ನನ್ನು ಕಂಗೆಡಿಸುತ್ತದೆ.

ಯುದ್ಧ ನನ್ನನ್ನು ಕಂಗೆಡಿಸುತ್ತದೆ.
ಬುದ್ಧ ನನ್ನನ್ನು ಸಂತೈಸುತ್ತಾನೆ.


Previous post ದೂರ ಹತ್ತಿರ
Next post ಅಪವ್ಯಯ

ಸಣ್ಣ ಕತೆ

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…