ಯುದ್ಧ

ನಾನು ನನ್ನ ದೇಶದ ಗಡಿಯನ್ನು
ಕೊಳೆಯದ ಹೆಣಕ್ಕೆ ಹೋಲಿಸುತ್ತೇನೆ.
ನಿತ್ಯ ಕಾವಲು ಕಾಯುವ ನೂರು
ಕಣ್ಣುಗಳಿಗಾಗಿ ದುಃಖಿಸುತ್ತೇನೆ.

ಹಸಿರು ಉಸಿರಾಡದ ಮರಗಳಿಗಾಗಿ
ಗೂಡು ಕಟ್ಟದ ಹಕ್ಕಿಗಳಿಗಾಗಿ
ಬೇವನ್ನೆ ನೆಚ್ಚಿ ಸಾಯುವ ಕೋಗಿಲೆಗಳಿಗಾಗಿ
ದುಃಖಿಸುತ್ತೇನೆ.

ನೀರವತೆಯಲ್ಲಿ ನರ್ತಿಸುವ
ಸದ್ದುಗಳ-ಆಕ್ರಂದನಗಳ
ಜುಗಲಬಂದಿ
ನನ್ನನ್ನು ಕಂಗೆಡಿಸುತ್ತದೆ.

ಕೆಂಪು ಸೂರ್ಯನನ್ನು ಹಣೆಗಿರಿಸಿಕೊಂಡು
ಹಳದಿ ಸೇವಂತಿಗೆಯನ್ನು ಮುಡಿಗಿರಿಸಿಕೊಂಡು
ನರೀಕ್ಷೆಯಲ್ಲೆ ನಲುಗಿಹೋಗುವ
ನೂರು ಹೆಣ್ಣುಗಳಿಗಾಗಿ ದುಃಖಿಸುತ್ತೇನೆ.

ಬೆಳದಿಂಗಳ ರಾತ್ರಿಗಳನ್ನು
ಮಲ್ಲಿಗೆ ಹಗಲುಗಳನ್ನು
ಮುದ್ದಿಸಬೇಕಾದ ಕಣ್ಣುಗಳು
ಯಮನ ಕಣ್ಣುಗಳಲ್ಲಿ
ಮುಗುಳು ನಗುವುದು
ನನ್ನನ್ನು ಕಂಗೆಡಿಸುತ್ತದೆ.

ಯುದ್ಧ ನನ್ನನ್ನು ಕಂಗೆಡಿಸುತ್ತದೆ.
ಬುದ್ಧ ನನ್ನನ್ನು ಸಂತೈಸುತ್ತಾನೆ.


Previous post ದೂರ ಹತ್ತಿರ
Next post ಅಪವ್ಯಯ

ಸಣ್ಣ ಕತೆ

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…