ನನ್ನ ಕವಿತೆ

ಕವಿತೆ ಹುಟ್ಟುವುದು ಮಹಲಿನಲ್ಲಲ್ಲ,
ಮುರುಕು ಜೋಪಡಿಗಳಲ್ಲಿ.
ಕವಿತೆ ಹುಟ್ಟುವುದು ಝಗಝಗಿಸುವ
ದೀಪಗಳ ಬೆಳಕಿನಲ್ಲಲ್ಲ ಬುಡ್ಡಿ-
ಬೆಳಕಿನ ಮಿಡುಕಿನಲ್ಲಿ.

ಕವಿತೆ ಹುಟ್ಟುವುದು ಕಲ್ಪನೆಯ ಮೂಸೆಯಲ್ಲಲ್ಲ
ದೈನಂದಿನ ಘಟನಾವಳಿಗಳಲ್ಲಿ.
ಕವಿತೆ ಹುಟ್ಟುವುದು ತುಂತುರುಮಳೆಯಲ್ಲಲ್ಲ
ನೊಂದವರ ಕಣ್ಣೀರಿನಲ್ಲಿ.

ಕವಿತೆ ಹುಟ್ಟುವುದು ಬಿಗಿದ ಕೊರಳಿನಲ್ಲಿ,
ನಿರಾಶೆಯ ನೆರಳಿನಲ್ಲಿ, ಅಸಹಾಯಕರ ಆಕ್ರಂದನದಲ್ಲಿ.
ಇವೆಲ್ಲ, ಅಲ್ಲಿ ಇಲ್ಲಿ ಹೆಕ್ಕಿ ಪಟ್ಟಿಮಾಡಿದ
ನುಡಿಮುತ್ತುಗಳು. ಹೋದಲ್ಲೆಲ್ಲ ಹಿಂಬಾಲಿಸಿ
ಕಾಡುವ ಮಾತಿನ ಭೂತಗಳು.

ಆದರೆ ನನ್ನ ಕವಿತೆ, ಹುಟ್ಟಿದ್ದು ಮಹಲಿನಲ್ಲಿ,
ಪಿಳಿಪಿಳಿ ಕಣ್ಣುಬಿಟ್ಟಿದ್ದು ಝಗಝಗಿಸುವ
ದೀಪಗಳ ಬೆಳಕಿನಲ್ಲಿ, ಬೆಳೆದಿದ್ದು ಕಲ್ಪನೆಯ-
ಮೂಸೆಯಲ್ಲಿ, ಅರಳಿದ್ದು ಕನಸಿನಲ್ಲಿ.

ಆದರೂ ಈ ಕವಿತೆಗೆ-
ತುಡಿತ-ಮಿಡಿತಗಳಿಗೆ ಸ್ಪಂದಿಸುವ ಹೃದಯವಿದೆ
ಮನದಲ್ಲಿ ಹೊಸೆದ ಹೊಸ ಕನಸಿದೆ.
ಕಣ್ಣ ಬಿಂಬದಲ್ಲಿ ಕೈ ಕೈ ಬೆಸೆದು ಜೊತೆಯಾಗಿ
ಹೆಜ್ಜೆಯಿಡುವ ಹಂಬಲವಿದೆ.

ಇಷ್ಟಾದರೂ ಹಲವರ ದೃಷ್ಟಿಯಲ್ಲಿ ನನ್ನದು
ಹುಟ್ಟುವುದಕ್ಕೆ ಮುಂಚೆಯೆ ಸತ್ತ ಕವಿತೆ
ಕೆಲವರ ದೃಷ್ಟಿಯಲ್ಲಂತು ಬದುಕಿದರೂ ಸತ್ತ ಕವಿತೆ!


Previous post ನೆನಪು ಮತ್ತು ಮರೆವು
Next post ಮಳೆ ಮತ್ತು ಮಗು

ಸಣ್ಣ ಕತೆ

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

cheap jordans|wholesale air max|wholesale jordans|wholesale jewelry|wholesale jerseys