ನನ್ನ ಕವಿತೆ

ಕವಿತೆ ಹುಟ್ಟುವುದು ಮಹಲಿನಲ್ಲಲ್ಲ,
ಮುರುಕು ಜೋಪಡಿಗಳಲ್ಲಿ.
ಕವಿತೆ ಹುಟ್ಟುವುದು ಝಗಝಗಿಸುವ
ದೀಪಗಳ ಬೆಳಕಿನಲ್ಲಲ್ಲ ಬುಡ್ಡಿ-
ಬೆಳಕಿನ ಮಿಡುಕಿನಲ್ಲಿ.

ಕವಿತೆ ಹುಟ್ಟುವುದು ಕಲ್ಪನೆಯ ಮೂಸೆಯಲ್ಲಲ್ಲ
ದೈನಂದಿನ ಘಟನಾವಳಿಗಳಲ್ಲಿ.
ಕವಿತೆ ಹುಟ್ಟುವುದು ತುಂತುರುಮಳೆಯಲ್ಲಲ್ಲ
ನೊಂದವರ ಕಣ್ಣೀರಿನಲ್ಲಿ.

ಕವಿತೆ ಹುಟ್ಟುವುದು ಬಿಗಿದ ಕೊರಳಿನಲ್ಲಿ,
ನಿರಾಶೆಯ ನೆರಳಿನಲ್ಲಿ, ಅಸಹಾಯಕರ ಆಕ್ರಂದನದಲ್ಲಿ.
ಇವೆಲ್ಲ, ಅಲ್ಲಿ ಇಲ್ಲಿ ಹೆಕ್ಕಿ ಪಟ್ಟಿಮಾಡಿದ
ನುಡಿಮುತ್ತುಗಳು. ಹೋದಲ್ಲೆಲ್ಲ ಹಿಂಬಾಲಿಸಿ
ಕಾಡುವ ಮಾತಿನ ಭೂತಗಳು.

ಆದರೆ ನನ್ನ ಕವಿತೆ, ಹುಟ್ಟಿದ್ದು ಮಹಲಿನಲ್ಲಿ,
ಪಿಳಿಪಿಳಿ ಕಣ್ಣುಬಿಟ್ಟಿದ್ದು ಝಗಝಗಿಸುವ
ದೀಪಗಳ ಬೆಳಕಿನಲ್ಲಿ, ಬೆಳೆದಿದ್ದು ಕಲ್ಪನೆಯ-
ಮೂಸೆಯಲ್ಲಿ, ಅರಳಿದ್ದು ಕನಸಿನಲ್ಲಿ.

ಆದರೂ ಈ ಕವಿತೆಗೆ-
ತುಡಿತ-ಮಿಡಿತಗಳಿಗೆ ಸ್ಪಂದಿಸುವ ಹೃದಯವಿದೆ
ಮನದಲ್ಲಿ ಹೊಸೆದ ಹೊಸ ಕನಸಿದೆ.
ಕಣ್ಣ ಬಿಂಬದಲ್ಲಿ ಕೈ ಕೈ ಬೆಸೆದು ಜೊತೆಯಾಗಿ
ಹೆಜ್ಜೆಯಿಡುವ ಹಂಬಲವಿದೆ.

ಇಷ್ಟಾದರೂ ಹಲವರ ದೃಷ್ಟಿಯಲ್ಲಿ ನನ್ನದು
ಹುಟ್ಟುವುದಕ್ಕೆ ಮುಂಚೆಯೆ ಸತ್ತ ಕವಿತೆ
ಕೆಲವರ ದೃಷ್ಟಿಯಲ್ಲಂತು ಬದುಕಿದರೂ ಸತ್ತ ಕವಿತೆ!


Previous post ನೆನಪು ಮತ್ತು ಮರೆವು
Next post ಮಳೆ ಮತ್ತು ಮಗು

ಸಣ್ಣ ಕತೆ

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…