Home / ಕವನ / ಕವಿತೆ / ನನ್ನ ಕವಿತೆ

ನನ್ನ ಕವಿತೆ

ಕವಿತೆ ಹುಟ್ಟುವುದು ಮಹಲಿನಲ್ಲಲ್ಲ,
ಮುರುಕು ಜೋಪಡಿಗಳಲ್ಲಿ.
ಕವಿತೆ ಹುಟ್ಟುವುದು ಝಗಝಗಿಸುವ
ದೀಪಗಳ ಬೆಳಕಿನಲ್ಲಲ್ಲ ಬುಡ್ಡಿ-
ಬೆಳಕಿನ ಮಿಡುಕಿನಲ್ಲಿ.

ಕವಿತೆ ಹುಟ್ಟುವುದು ಕಲ್ಪನೆಯ ಮೂಸೆಯಲ್ಲಲ್ಲ
ದೈನಂದಿನ ಘಟನಾವಳಿಗಳಲ್ಲಿ.
ಕವಿತೆ ಹುಟ್ಟುವುದು ತುಂತುರುಮಳೆಯಲ್ಲಲ್ಲ
ನೊಂದವರ ಕಣ್ಣೀರಿನಲ್ಲಿ.

ಕವಿತೆ ಹುಟ್ಟುವುದು ಬಿಗಿದ ಕೊರಳಿನಲ್ಲಿ,
ನಿರಾಶೆಯ ನೆರಳಿನಲ್ಲಿ, ಅಸಹಾಯಕರ ಆಕ್ರಂದನದಲ್ಲಿ.
ಇವೆಲ್ಲ, ಅಲ್ಲಿ ಇಲ್ಲಿ ಹೆಕ್ಕಿ ಪಟ್ಟಿಮಾಡಿದ
ನುಡಿಮುತ್ತುಗಳು. ಹೋದಲ್ಲೆಲ್ಲ ಹಿಂಬಾಲಿಸಿ
ಕಾಡುವ ಮಾತಿನ ಭೂತಗಳು.

ಆದರೆ ನನ್ನ ಕವಿತೆ, ಹುಟ್ಟಿದ್ದು ಮಹಲಿನಲ್ಲಿ,
ಪಿಳಿಪಿಳಿ ಕಣ್ಣುಬಿಟ್ಟಿದ್ದು ಝಗಝಗಿಸುವ
ದೀಪಗಳ ಬೆಳಕಿನಲ್ಲಿ, ಬೆಳೆದಿದ್ದು ಕಲ್ಪನೆಯ-
ಮೂಸೆಯಲ್ಲಿ, ಅರಳಿದ್ದು ಕನಸಿನಲ್ಲಿ.

ಆದರೂ ಈ ಕವಿತೆಗೆ-
ತುಡಿತ-ಮಿಡಿತಗಳಿಗೆ ಸ್ಪಂದಿಸುವ ಹೃದಯವಿದೆ
ಮನದಲ್ಲಿ ಹೊಸೆದ ಹೊಸ ಕನಸಿದೆ.
ಕಣ್ಣ ಬಿಂಬದಲ್ಲಿ ಕೈ ಕೈ ಬೆಸೆದು ಜೊತೆಯಾಗಿ
ಹೆಜ್ಜೆಯಿಡುವ ಹಂಬಲವಿದೆ.

ಇಷ್ಟಾದರೂ ಹಲವರ ದೃಷ್ಟಿಯಲ್ಲಿ ನನ್ನದು
ಹುಟ್ಟುವುದಕ್ಕೆ ಮುಂಚೆಯೆ ಸತ್ತ ಕವಿತೆ
ಕೆಲವರ ದೃಷ್ಟಿಯಲ್ಲಂತು ಬದುಕಿದರೂ ಸತ್ತ ಕವಿತೆ!


Tagged:

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...