Home / ಕವನ / ಕವಿತೆ / ನನ್ನ ಕವಿತೆ

ನನ್ನ ಕವಿತೆ

ಕವಿತೆ ಹುಟ್ಟುವುದು ಮಹಲಿನಲ್ಲಲ್ಲ,
ಮುರುಕು ಜೋಪಡಿಗಳಲ್ಲಿ.
ಕವಿತೆ ಹುಟ್ಟುವುದು ಝಗಝಗಿಸುವ
ದೀಪಗಳ ಬೆಳಕಿನಲ್ಲಲ್ಲ ಬುಡ್ಡಿ-
ಬೆಳಕಿನ ಮಿಡುಕಿನಲ್ಲಿ.

ಕವಿತೆ ಹುಟ್ಟುವುದು ಕಲ್ಪನೆಯ ಮೂಸೆಯಲ್ಲಲ್ಲ
ದೈನಂದಿನ ಘಟನಾವಳಿಗಳಲ್ಲಿ.
ಕವಿತೆ ಹುಟ್ಟುವುದು ತುಂತುರುಮಳೆಯಲ್ಲಲ್ಲ
ನೊಂದವರ ಕಣ್ಣೀರಿನಲ್ಲಿ.

ಕವಿತೆ ಹುಟ್ಟುವುದು ಬಿಗಿದ ಕೊರಳಿನಲ್ಲಿ,
ನಿರಾಶೆಯ ನೆರಳಿನಲ್ಲಿ, ಅಸಹಾಯಕರ ಆಕ್ರಂದನದಲ್ಲಿ.
ಇವೆಲ್ಲ, ಅಲ್ಲಿ ಇಲ್ಲಿ ಹೆಕ್ಕಿ ಪಟ್ಟಿಮಾಡಿದ
ನುಡಿಮುತ್ತುಗಳು. ಹೋದಲ್ಲೆಲ್ಲ ಹಿಂಬಾಲಿಸಿ
ಕಾಡುವ ಮಾತಿನ ಭೂತಗಳು.

ಆದರೆ ನನ್ನ ಕವಿತೆ, ಹುಟ್ಟಿದ್ದು ಮಹಲಿನಲ್ಲಿ,
ಪಿಳಿಪಿಳಿ ಕಣ್ಣುಬಿಟ್ಟಿದ್ದು ಝಗಝಗಿಸುವ
ದೀಪಗಳ ಬೆಳಕಿನಲ್ಲಿ, ಬೆಳೆದಿದ್ದು ಕಲ್ಪನೆಯ-
ಮೂಸೆಯಲ್ಲಿ, ಅರಳಿದ್ದು ಕನಸಿನಲ್ಲಿ.

ಆದರೂ ಈ ಕವಿತೆಗೆ-
ತುಡಿತ-ಮಿಡಿತಗಳಿಗೆ ಸ್ಪಂದಿಸುವ ಹೃದಯವಿದೆ
ಮನದಲ್ಲಿ ಹೊಸೆದ ಹೊಸ ಕನಸಿದೆ.
ಕಣ್ಣ ಬಿಂಬದಲ್ಲಿ ಕೈ ಕೈ ಬೆಸೆದು ಜೊತೆಯಾಗಿ
ಹೆಜ್ಜೆಯಿಡುವ ಹಂಬಲವಿದೆ.

ಇಷ್ಟಾದರೂ ಹಲವರ ದೃಷ್ಟಿಯಲ್ಲಿ ನನ್ನದು
ಹುಟ್ಟುವುದಕ್ಕೆ ಮುಂಚೆಯೆ ಸತ್ತ ಕವಿತೆ
ಕೆಲವರ ದೃಷ್ಟಿಯಲ್ಲಂತು ಬದುಕಿದರೂ ಸತ್ತ ಕವಿತೆ!


Tagged:

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...