ನನ್ನ ಕವಿತೆ

ಕವಿತೆ ಹುಟ್ಟುವುದು ಮಹಲಿನಲ್ಲಲ್ಲ,
ಮುರುಕು ಜೋಪಡಿಗಳಲ್ಲಿ.
ಕವಿತೆ ಹುಟ್ಟುವುದು ಝಗಝಗಿಸುವ
ದೀಪಗಳ ಬೆಳಕಿನಲ್ಲಲ್ಲ ಬುಡ್ಡಿ-
ಬೆಳಕಿನ ಮಿಡುಕಿನಲ್ಲಿ.

ಕವಿತೆ ಹುಟ್ಟುವುದು ಕಲ್ಪನೆಯ ಮೂಸೆಯಲ್ಲಲ್ಲ
ದೈನಂದಿನ ಘಟನಾವಳಿಗಳಲ್ಲಿ.
ಕವಿತೆ ಹುಟ್ಟುವುದು ತುಂತುರುಮಳೆಯಲ್ಲಲ್ಲ
ನೊಂದವರ ಕಣ್ಣೀರಿನಲ್ಲಿ.

ಕವಿತೆ ಹುಟ್ಟುವುದು ಬಿಗಿದ ಕೊರಳಿನಲ್ಲಿ,
ನಿರಾಶೆಯ ನೆರಳಿನಲ್ಲಿ, ಅಸಹಾಯಕರ ಆಕ್ರಂದನದಲ್ಲಿ.
ಇವೆಲ್ಲ, ಅಲ್ಲಿ ಇಲ್ಲಿ ಹೆಕ್ಕಿ ಪಟ್ಟಿಮಾಡಿದ
ನುಡಿಮುತ್ತುಗಳು. ಹೋದಲ್ಲೆಲ್ಲ ಹಿಂಬಾಲಿಸಿ
ಕಾಡುವ ಮಾತಿನ ಭೂತಗಳು.

ಆದರೆ ನನ್ನ ಕವಿತೆ, ಹುಟ್ಟಿದ್ದು ಮಹಲಿನಲ್ಲಿ,
ಪಿಳಿಪಿಳಿ ಕಣ್ಣುಬಿಟ್ಟಿದ್ದು ಝಗಝಗಿಸುವ
ದೀಪಗಳ ಬೆಳಕಿನಲ್ಲಿ, ಬೆಳೆದಿದ್ದು ಕಲ್ಪನೆಯ-
ಮೂಸೆಯಲ್ಲಿ, ಅರಳಿದ್ದು ಕನಸಿನಲ್ಲಿ.

ಆದರೂ ಈ ಕವಿತೆಗೆ-
ತುಡಿತ-ಮಿಡಿತಗಳಿಗೆ ಸ್ಪಂದಿಸುವ ಹೃದಯವಿದೆ
ಮನದಲ್ಲಿ ಹೊಸೆದ ಹೊಸ ಕನಸಿದೆ.
ಕಣ್ಣ ಬಿಂಬದಲ್ಲಿ ಕೈ ಕೈ ಬೆಸೆದು ಜೊತೆಯಾಗಿ
ಹೆಜ್ಜೆಯಿಡುವ ಹಂಬಲವಿದೆ.

ಇಷ್ಟಾದರೂ ಹಲವರ ದೃಷ್ಟಿಯಲ್ಲಿ ನನ್ನದು
ಹುಟ್ಟುವುದಕ್ಕೆ ಮುಂಚೆಯೆ ಸತ್ತ ಕವಿತೆ
ಕೆಲವರ ದೃಷ್ಟಿಯಲ್ಲಂತು ಬದುಕಿದರೂ ಸತ್ತ ಕವಿತೆ!


Previous post ನೆನಪು ಮತ್ತು ಮರೆವು
Next post ಮಳೆ ಮತ್ತು ಮಗು

ಸಣ್ಣ ಕತೆ

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ತಿಮ್ಮರಾಯಪ್ಪನ ಬುದ್ಧಿವಾದ

    ಪ್ರಕರಣ ೧೧ ಮಾರನೆಯ ದಿನ ತನ್ನ ಮೀಟಂಗ್ ಕೆಲಸವನ್ನು ಮುಗಿಸಿಕೊಂಡು ತಂಗಿಯ ಮನೆಯಲ್ಲಿ ಊಟಮಾಡಿಕೊಂಡು ರಾತ್ರಿ ಎಂಟು ಗಂಟೆಗೆ ತಿಮ್ಮರಾಯಪ್ಪನ ಮನೆಗೆ ರಂಗಣ್ಣ ಹೊರಟನು. ಆ ದಿನ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…