Home / ಕವನ / ಕವಿತೆ / ನನ್ನ ಕವಿತೆ

ನನ್ನ ಕವಿತೆ

ಕವಿತೆ ಹುಟ್ಟುವುದು ಮಹಲಿನಲ್ಲಲ್ಲ,
ಮುರುಕು ಜೋಪಡಿಗಳಲ್ಲಿ.
ಕವಿತೆ ಹುಟ್ಟುವುದು ಝಗಝಗಿಸುವ
ದೀಪಗಳ ಬೆಳಕಿನಲ್ಲಲ್ಲ ಬುಡ್ಡಿ-
ಬೆಳಕಿನ ಮಿಡುಕಿನಲ್ಲಿ.

ಕವಿತೆ ಹುಟ್ಟುವುದು ಕಲ್ಪನೆಯ ಮೂಸೆಯಲ್ಲಲ್ಲ
ದೈನಂದಿನ ಘಟನಾವಳಿಗಳಲ್ಲಿ.
ಕವಿತೆ ಹುಟ್ಟುವುದು ತುಂತುರುಮಳೆಯಲ್ಲಲ್ಲ
ನೊಂದವರ ಕಣ್ಣೀರಿನಲ್ಲಿ.

ಕವಿತೆ ಹುಟ್ಟುವುದು ಬಿಗಿದ ಕೊರಳಿನಲ್ಲಿ,
ನಿರಾಶೆಯ ನೆರಳಿನಲ್ಲಿ, ಅಸಹಾಯಕರ ಆಕ್ರಂದನದಲ್ಲಿ.
ಇವೆಲ್ಲ, ಅಲ್ಲಿ ಇಲ್ಲಿ ಹೆಕ್ಕಿ ಪಟ್ಟಿಮಾಡಿದ
ನುಡಿಮುತ್ತುಗಳು. ಹೋದಲ್ಲೆಲ್ಲ ಹಿಂಬಾಲಿಸಿ
ಕಾಡುವ ಮಾತಿನ ಭೂತಗಳು.

ಆದರೆ ನನ್ನ ಕವಿತೆ, ಹುಟ್ಟಿದ್ದು ಮಹಲಿನಲ್ಲಿ,
ಪಿಳಿಪಿಳಿ ಕಣ್ಣುಬಿಟ್ಟಿದ್ದು ಝಗಝಗಿಸುವ
ದೀಪಗಳ ಬೆಳಕಿನಲ್ಲಿ, ಬೆಳೆದಿದ್ದು ಕಲ್ಪನೆಯ-
ಮೂಸೆಯಲ್ಲಿ, ಅರಳಿದ್ದು ಕನಸಿನಲ್ಲಿ.

ಆದರೂ ಈ ಕವಿತೆಗೆ-
ತುಡಿತ-ಮಿಡಿತಗಳಿಗೆ ಸ್ಪಂದಿಸುವ ಹೃದಯವಿದೆ
ಮನದಲ್ಲಿ ಹೊಸೆದ ಹೊಸ ಕನಸಿದೆ.
ಕಣ್ಣ ಬಿಂಬದಲ್ಲಿ ಕೈ ಕೈ ಬೆಸೆದು ಜೊತೆಯಾಗಿ
ಹೆಜ್ಜೆಯಿಡುವ ಹಂಬಲವಿದೆ.

ಇಷ್ಟಾದರೂ ಹಲವರ ದೃಷ್ಟಿಯಲ್ಲಿ ನನ್ನದು
ಹುಟ್ಟುವುದಕ್ಕೆ ಮುಂಚೆಯೆ ಸತ್ತ ಕವಿತೆ
ಕೆಲವರ ದೃಷ್ಟಿಯಲ್ಲಂತು ಬದುಕಿದರೂ ಸತ್ತ ಕವಿತೆ!


Tagged:

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...