Home / ಕವನ / ಕವಿತೆ / ಪ್ರೀತಿ ಸತ್ತ ಮನೆಯಲ್ಲಿ

ಪ್ರೀತಿ ಸತ್ತ ಮನೆಯಲ್ಲಿ

ಗಂಡ
ಹಳೆಯ ಪ್ರೇಯಸಿಯ ನೆನಪುಗಳನ್ನು
ಎದೆಗೊತ್ತಿಕೊಂಡು ಸಂತೈಸುತ್ತಿದ್ದಾನೆ.
ಹೆಂಡತಿ-
ಒಂಟಿ ಬಾವಲಿಯ ರೆಕ್ಕೆ ಬಡಿತಗಳನ್ನು
ಎಣಿಸುತ್ತಿದ್ದಾಳೆ.
ಗೋಡೆಗಳು ಪಿಸುಗುಟ್ಟುತ್ತಿವೆ ಗಂಟಲಲ್ಲಿ
ಪ್ರೀತಿ ಸತ್ತಿದೆ ಮನೆಯಲ್ಲಿ.

ಗಂಡ
ಸವೆದ ಕನಸುಗಳನ್ನು ಗುಡ್ಡೆಹಾಕಿ
ಬೆಂಕಿ ಹಚ್ಚುತ್ತಿದ್ದಾನೆ.
ಹೆಂಡತಿ-
ಮೇಣದ ಬತ್ತಿಗಳಾಗಿ ಉರಿದುಹೋಗಿರಿ
ಎಂದು ತಾರೆಯರನ್ನು ಶಪಿಸುತ್ತಿದ್ದಾಳೆ.
ಗೋಡೆಗಳು ಪಿಸುಗುಟ್ಟುತ್ತಿವೆ ಗಂಟಲಲ್ಲಿ
ಪ್ರೀತಿ ಸತ್ತಿದೆ ಮನೆಯಲ್ಲಿ.

ಕೆಂಡ ಹೀರುತ್ತಾ ಗಂಡ
ಬಂಡೆಯಾಗುತ್ತಿದ್ದಾನೆ ಒಳಗೆ
ಚಳಿಗಾಳಿಯ ಸೆರಗಲ್ಲಿ ಸುತ್ತಿಕೊಂಡು
ಹೆಪ್ಪುಗಟ್ಟುತ್ತಿದ್ದಾಳೆ ಹೆಂಡತಿ ಹೊರಗೆ.
ಗೋಡೆಗಳು ಪಿಸುಗುಟ್ಟುತ್ತಿವೆ ಗಂಟಲಲ್ಲಿ
ಪ್ರೀತಿ ಸತ್ತಿದೆ ಮನೆಯಲ್ಲಿ.
‘ಪ್ರೀತಿ’ ಎಲ್ಲಾ ಮೆಟ್ಟಿ ಹುಟ್ಟಿತ್ತು.
ನೀಟಾದ ಕಣ್ಣು, ಮೂಗು, ತುಟಿ
ಶಿಲ್ಪ ಮೈ ಕಟ್ಟು ಹೊತ್ತಿತ್ತು.
ಕದ ತಟ್ಟಬಹುದೆ ಸಾವು?

ಹಣ್ಣಾಯಿತು ಪ್ರೀತಿ.
ಮಣ್ಣಾಯಿತು ಪ್ರೀತಿ.

ಕತ್ತಲು ಕವನಿಸುವ ಹೊತ್ತಿನಲ್ಲಿ
ಗೋಡೆಗಳು ಬಿಕ್ಕುತ್ತಿವೆ ಮೌನದಲ್ಲಿ
ಪ್ರೀತಿ ಸತ್ತ ಮನೆಯಲ್ಲಿ.


Tagged:

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...